Webdunia - Bharat's app for daily news and videos

Install App

ದರ್ಶನ್, ಪವಿತ್ರಾ ಗೌಡ ಮೊಬೈಲ್ ಸೀಕ್ರೆಟ್ ತಿಳಿಯಲು ಪೊಲೀಸರ ಹರಸಾಹಸ

Krishnaveni K
ಭಾನುವಾರ, 6 ಅಕ್ಟೋಬರ್ 2024 (11:03 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿ ದರ್ಶನ್ ಮೊಬೈಲ್ ರಿಟ್ರೀವ್ ಗಾಗಿ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಈ ಪ್ರಕರಣದಲ್ಲಿ ಇಬ್ಬರ ಮೊಬೈಲ್ ನಲ್ಲಿರುವ ಮಾಹಿತಿ ಸಂಗ್ರಹಣೆ ಕೂಡಾ ಮಹತ್ವದ ಸಾಕ್ಷಿಯಾಗಲಿದೆ. ಅದರಲ್ಲೂ ದರ್ಶನ್ ಮತ್ತು ಪವಿತ್ರಾ ಮೊಬೈಲ್ ನಲ್ಲಿ ರೇಣುಕಾಸ್ವಾಮಿಗೆ ಸಂಬಂಧಿಸಿದ ಮಾಹಿತಿ, ಫೋಟೋಗಳು ಲಭ್ಯವಾಗುವ ಸಾಧ್ಯತೆಗಳಿವೆ. ಇದು ಪ್ರಕರಣಕ್ಕೆ ಮುಖ್ಯ ಸಾಕ್ಷಿಯಾಗಲಿವೆ.

ಆದರೆ ಇಬ್ಬರೂ ಐಫೋನ್ ಬಳಸುತ್ತಿದ್ದರು. ಇಬ್ಬರ ಫೋನ್ ರಿಟ್ರೀವ್ ಮಾಡುವುದು ಕಷ್ಟವಾಗುತ್ತಿದೆ. ಎಫ್ಎಸ್ಎಲ್ ವರದಿಗೆ ಕಳುಹಿಸಿ ಇಷ್ಟು ದಿನ ಕಳೆದಿದ್ದರೂ ಇನ್ನೂ ಪೊಲೀಸರು ಇಬ್ಬರ ಮೊಬೈಲ್ ಸೀಕ್ರೆಟ್ ಪಡೆಯಲು ಸಾಧ್ಯವಾಗಿಲ್ಲ. ಇನ್ನೊಂದು ವಾರದಲ್ಲಿ ಮೊಬೈಲ್ ರಿಟ್ರೀವ್ ಆಗಿ ವರದಿ ಬರುವ ಸಾಧ್ಯತೆಯಿದೆ.

ಮೊಬೈಲ್ ರಿಟ್ರೀವ್ ಆದ ಬಳಿಕ ಆ ಸಾಕ್ಷ್ಯಗಳನ್ನೂ ಕಲೆ ಹಾಕಿ ಪೊಲೀಸರು ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದ್ದಾರೆ. ಆಗ ಪ್ರಕರಣಕ್ಕೆ ಮತ್ತಷ್ಟು ಬಲ ಬರಲಿದೆ. ಈಗಾಗಲೇ ಆರೋಪಿಗಳು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು ಅಕ್ಟೋಬರ್ 8 ಕ್ಕೆ ತೀರ್ಪು ಬರುವ ಸಾಧ್ಯತೆಗಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ಮುಂದಿನ ಸುದ್ದಿ
Show comments