Select Your Language

Notifications

webdunia
webdunia
webdunia
webdunia

ಕುಮಾರಸ್ವಾಮಿ ಪುತ್ರನ ಸೀತಾರಾಮ ಕಲ್ಯಾಣ ವೀಕ್ಷಿಸಿದ ಸಿದ್ದರಾಮಯ್ಯ, ಪರಮೇಶ್ವರ್

ಕುಮಾರಸ್ವಾಮಿ ಪುತ್ರನ ಸೀತಾರಾಮ ಕಲ್ಯಾಣ ವೀಕ್ಷಿಸಿದ ಸಿದ್ದರಾಮಯ್ಯ, ಪರಮೇಶ್ವರ್
ಬೆಂಗಳೂರು , ಶುಕ್ರವಾರ, 25 ಜನವರಿ 2019 (09:33 IST)
ಬೆಂಗಳೂರು: ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಗೌಡ ಮತ್ತು ರಚಿತಾ ರಾಂ ಅಭಿನಯದ ಸೀತಾರಾಮ ಕಲ್ಯಾಣ ಇಂದಿನಿಂದ ತೆರೆಗೆ ಬಂದಿದೆ. ನಿಖಿಲ್ ಸಿನಿಮಾವನ್ನು ರಾಜಕೀಯ ಗಣ್ಯರೂ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ನಿನ್ನೆ ಒರೆಯಾನ್ ಮಾಲ್ ನಲ್ಲಿ ನಡೆದ ಪ್ರೀಮಿಯರ್ ಶೋಗೆ ಸಿಎಂ ಕುಮಾರಸ್ವಾಮಿ ಜತೆಗೆ ಸಿದ್ದರಾಮಯ್ಯ, ಜಮೀರ್ ಅಹಮ್ಮದ್, ಡಾ. ಜಿ ಪರಮೇಶ್ವರ್ ಮುಂತಾದ ರಾಜಕೀಯ ಸ್ನೇಹಿತರು ಆಗಮಿಸಿ ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಎಲ್ಲರನ್ನೂ ಸ್ವತಃ ನಿಖಿಲ್ ಕುಮಾರಸ್ವಾಮಿ ಆತ್ಮೀಯವಾಗಿ ಬರಮಾಡಿಕೊಂಡಿದ್ದು ವಿಶೇಷವಾಗಿತ್ತು. ಇನ್ನು, ಇಂದಿನಿಂದ ಥಿಯೇಟರ್ ಗಳಲ್ಲಿ ಸೀತಾರಾಮ ಕಲ್ಯಾಣ ತೆರೆ ಕಾಣುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಕೊನೆಗೂ ಕಲರ್ಸ್ ಕನ್ನಡದ ಒಂದು ಧಾರವಾಹಿ ಮುಗೀತು!