ದರ್ಶನ್ ಕೇಸ್ ಮುಚ್ಚಲು ರಾಜ್ಯದ ಪ್ರಭಾವಿ ಸಚಿವರಿಂದಲೇ ಕರೆ ಆರೋಪ

Krishnaveni K
ಗುರುವಾರ, 13 ಜೂನ್ 2024 (13:33 IST)
ಬೆಂಗಳೂರು: ರೇಣುಕಾಸ್ವಾಮಿ ಕೇಸ್ ಮುಚ್ಚಿಹಾಕಿ ದರ್ಶನ್ ರನ್ನು ಕೇಸ್ ನಿಂದ ಬಚಾವ್ ಮಾಡಲು ರಾಜ್ಯದ ಪ್ರಭಾವಿ ಸಚಿವರೇ ಒಬ್ಬರು ಪೊಲೀಸರ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.

ಹತ್ಯೆ ಪ್ರಕರಣದಲ್ಲಿ ದರ್ಶನ್ ಪ್ರಮುಖ ಆರೋಪಿಯಾಗಿದ್ದಾರೆ. ಆದರೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ನೂರಾರು ಬಾರಿ ಕರೆ ಮಾಡಿರುವ ಪ್ರಭಾವಿ ಸಚಿವರೊಬ್ಬರು ಕೇಸ್ ನಿಂದ ದರ್ಶನ್ ರನ್ನು ತೆಗೆದುಹಾಕುವಂತೆ ಒತ್ತಡ ಹೇರಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ದರ್ಶನ್ ಗೆ ಯಾವೆಲ್ಲಾ ರಾಜಕಾರಣಿಗಳ ಜೊತೆ ಆತ್ಮೀಯ ಸಂಬಂಧವಿದೆ ಎಂದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಇವರೇ ಯಾರೋ ಕರೆ ಮಾಡಿರುವುದು ಖಚಿತವಾಗಿದೆ.

ಇನ್ನು, ತನಿಖಾಧಿಕಾರಿಗಳಿಗೆ ಮಾತ್ರವಲ್ಲ, ಮರಣೋತ್ತರ ಪರೀಕ್ಷೆ ವರದಿ ತಯಾರಿಸುವ ವೈದ್ಯರಿಗೂ 1 ಕೋಟಿ ರೂ. ಆಫರ್ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮರಣೋತ್ತರ ವರದಿಯಲ್ಲಿ ಹೃದಯಾಘಾತದಿಂದ ಸಾವು ಎಂದು ವರದಿ ನೀಡಿ ದರ್ಶನ್ ರನ್ನು ಬಚಾವ್ ಮಾಡಲು ರಾಜಕಾರಣಿಯಿಂದ ಒತ್ತಡ ಬಂದಿದೆಯಂತೆ.

ಆದರೆ ಸದ್ಯದ ಮಟ್ಟಿಗೆ ಯಾವ ಅಧಿಕಾರಿಗಳೂ ಈ ಎಲ್ಲಾ ಒತ್ತಡಗಳಿಗೆ ಮಣಿಯದೇ ಸೂಕ್ತ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ದರ್ಶನ್ ಸಮಾಜದಲ್ಲಿ ಸೆಲೆಬ್ರಿಟಿ ಸ್ಥಾನ ಪಡೆದುಕೊಂಡಿದ್ದು, ಅವರು ಈ ಕೇಸ್ ನಲ್ಲಿ ಸಿಲುಕಿಕೊಂಡರೆ ಅವರ ಜೀವನವೇ ಹಾಳಾಗುತ್ತದೆ ಎಂಬ ಕಾರಣಕ್ಕೆ ಪ್ರಭಾವಿಗಳನ್ನು ಬಳಸಿ ಈ ಕೇಸ್ ನಿಂದ ಬಚಾವ್ ಮಾಡಲು ಪ್ರಯತ್ನ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments