Webdunia - Bharat's app for daily news and videos

Install App

ಕೋಲಾರದಲ್ಲಿ ಆಸ್ತಿ ಖರೀದಿಗೆ ಬಂದ ನಟ ಪ್ರಭುದೇವಗೆ ಫ್ಯಾನ್ಸ್ ಮುತ್ತಿಗೆ

Krishnaveni K
ಶುಕ್ರವಾರ, 22 ಮಾರ್ಚ್ 2024 (12:22 IST)
Photo Courtesy: Twitter
ಕೋಲಾರ: ಬಹುಭಾಷಾ ನಟ, ಕನ್ನಡಿಗ ಪ್ರಭುದೇವ ಆಸ್ತಿ ಖರೀದಿ ವಿಚಾರವಾಗಿ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿಗೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ ಅವರನ್ನು ಫ್ಯಾನ್ಸ್ ಮುತ್ತಿಕೊಂಡಿದ್ದಾರೆ.

ಆಸ್ತಿ ನೋಂದಣಿ ವಿಚಾರವಾಗಿ ಅವರು ಬಂಗಾರಪೇಟೆ ತಾಲೂಕಿನ ಉಪನೋಂದಣಾಧಿಕಾರಿ ಕಚೇರಿಗೆ ಬಂದಿದ್ದಾರೆ. ಈ ವೇಳೆ ಅವರ ಜೊತೆ ಸೆಲ್ಫೀ ತೆಗೆದುಕೊಳ್ಳಲು ಫ್ಯಾನ್ಸ್ ಮುತ್ತಿಗೆ ಹಾಕಿದ್ದಾರೆ. ಮೂಲತಃ ಮೈಸೂರು ಮೂಲದವರಾದ ಪ್ರಭುದೇವ ಪರಭಾಷೆಗಳಲ್ಲಿ ಮಿಂಚಿದರೂ ಈಗಲೂ ಕರ್ನಾಟಕದ ಜೊತೆ ನಂಟು ಉಳಿಸಿಕೊಂಡಿದ್ದಾರೆ.

ಈಗಲೂ ಪ್ರಭುದೇವ ಕನ್ನಡ ಪ್ರೀತಿ ಇಟ್ಟುಕೊಂಡಿದ್ದಾರೆ. ಇಲ್ಲಿ ಈಗಲೂ ಅವರ ಕುಟುಂಬಸ್ಥರ ಆಸ್ತಿ-ಪಾಸ್ತಿಯಿದೆ. ಇದೀಗ ಕೋಲಾರದಲ್ಲಿ ಪ್ರಭುದೇವ ಆಸ್ತಿ ಖರೀದಿ ಮಾಡಿದ್ದಾರೆ. ಅದರ ನೋಂದಣಿ ಸಂಬಂಧವಾಗಿ ತಮ್ಮ ಸಂಗಡಿಗರೊಂದಿಗೆ ಚಿನ್ನದ ನಾಡಿಗೆ ಬಂದಿದ್ದರು.

ಇತ್ತೀಚೆಗೆ ಪ್ರಭುದೇವ-ಶಿವರಾಜ್ ಕುಮಾರ್  ಪ್ರಮುಖ ಪಾತ್ರದಲ್ಲಿ ನಟಿಸಿದ್ದ ಯೋಗರಾಜ್ ಭಟ್ ನಿರ್ದೇಶನದ ಕರಟಕ ದಮನಕ ಸಿನಿಮಾ ಬಿಡುಗಡೆಯಾಗಿ ತಕ್ಕಮಟ್ಟಿಗೆ ಯಶಸ್ವಿಯಾಗಿತ್ತು. ಇದರ ಬೆನ್ನಲ್ಲೇ ಅವರು ಕರ್ನಾಟಕದಲ್ಲೇ ಆಸ್ತಿ ಖರೀದಿಸಿರುವುದು ವಿಶೇಷವಾಗಿದೆ.

 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments