Webdunia - Bharat's app for daily news and videos

Install App

100 ಕೋಟಿ ವಂಚನೆ ಪ್ರಕರಣ: ಪ್ರಕಾಶ್ ರಾಜ್ ಗೆ ಇಡಿ ನೋಟಿಸ್

Webdunia
ಶುಕ್ರವಾರ, 24 ನವೆಂಬರ್ 2023 (11:08 IST)
ಬೆಂಗಳೂರು: ಬಹುಭಾಷಾ ನಟ ಪ್ರಕಾಶ್ ರಾಜ್ ಗೆ 100 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ.

ತಿರುಚ್ಚಿ ಮೂಲದ ಪ್ರಣವ್ ಜ್ಯುವೆಲ್ಲರ್ಸ್ ಗೆ ಪ್ರಕಾಶ್ ರಾಜ್ ರಾಯಭಾರಿಯಾಗಿದ್ದರು. ಆದರೆ ಈ ಸಂಸ್ಥೆ ಹೂಡಿಕೆದಾರರಿಗೆ 100 ಕೋಟಿ ರೂ. ವಂಚಿಸಿದ ಆರೋಪ ಕೇಳಿಬಂದಿತ್ತು. ಈ ಸಂಬಂಧ ಈ ಜ್ಯುವೆಲ್ಲರ್ಸ್ ಶಾಖೆಗಳ ಮೇಲೆ ಇ.ಡಿ. ದಾಳಿ ನಡೆಸಿತ್ತು.

ಈ ಸಂಸ್ಥೆಯ ರಾಯಭಾರಿಯಾಗಿದ್ದರೂ ಪ್ರಕಾಶ್ ರಾಜ್ ಸಂಸ್ಥೆಯ ಹಗರಣದ ಬಗ್ಗೆ ಮೌನವಾಗಿದ್ದಾರೆ. ಹೀಗಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಇ.ಡಿ. ನೋಟಿಸ್ ನೀಡಿದೆ. ಆಭರಣ ಅಂಗಡಿ ಮಾಲಿಕರು ಮತ್ತು ಪತ್ನಿಗೂ ಲುಕ್ ಔಟ್ ನೋಟಿಸ್ ನೋಟಿಸ್ ಜಾರಿ ಮಾಡಿದೆ.

ಚಿನ್ನದ ಮೇಲೆ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಸಿಗುತ್ತದೆ ಎಂದು ನಂಬಿಸಿ ಹೂಡಿಕೆದಾರರಿಂದ 100 ಕೋಟಿ ರೂ. ಸಂಗ್ರಹಿಸಿದೆ. ಆದರೆ ಲಾಭವೂ ಇಲ್ಲ, ಹಣವೂ ಇಲ್ಲ ಎಂದಾಗಿತ್ತು.  ಈ ಪ್ರಕರಣ ಈಗ ನಟ ಪ್ರಕಾಶ್ ರಾಜ್ ಗೂ ಸಂಕಷ್ಟ ತಂದೊಡ್ಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಫ್ಯಾನ್ಸ್, ರಮ್ಯಾ ಜಟಾಪಟಿಯಲ್ಲಿ ಹೊಸ ತಿರುವು, ದರ್ಶನ್ ಫ್ಯಾನ್ಸ್‌ಗೆ ನಡುಕ ಶುರು

ಡಿ ಫ್ಯಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ: ನಟ ಚೇತನ್ ಕುಮಾರ್‌ಗೆ ನಟಿ ರಮ್ಯಾ ಧನ್ಯವಾದ

ತಮ್ಮ ಕುಟುಂಬದಲ್ಲೇ ಇಷ್ಟೆಲ್ಲಾ ನಡೆಯುವಾಗ ಸುಮ್ಮನಿದ್ರು: ಯುವ ಮಾಜಿ ಪತ್ನಿ ಪೋಸ್ಟ್ ವೈರಲ್

ವಿದೇಶದಲ್ಲಿ 'ಸು ಫ್ರಮ್ ಸೋ' ನೋಡಲು ಕಾಯುತ್ತಿರುವ ಕನ್ನಡಭಿಮಾನಿಗಳಿಗೆ ಗುಡ್‌ನ್ಯೂಸ್‌

ದರ್ಶನ್, ರಮ್ಯಾ ರಗಳೆ ನಡುವೆ ಪವಿತ್ರಾ ಗೌಡ ಇಂದೇನಿದೂ ಪೋಸ್ಟ್‌

ಮುಂದಿನ ಸುದ್ದಿ
Show comments