Select Your Language

Notifications

webdunia
webdunia
webdunia
webdunia

ಶಿವಣ್ಣನಿಗೆ ಮತ್ತೆ ಕೌಂಟರ್ ಕೊಟ್ಟ ಪ್ರಶಾಂತ್ ಸಂಬರಗಿ

ಶಿವಣ್ಣನಿಗೆ ಮತ್ತೆ ಕೌಂಟರ್ ಕೊಟ್ಟ ಪ್ರಶಾಂತ್ ಸಂಬರಗಿ
ಬೆಂಗಳೂರು , ಭಾನುವಾರ, 7 ಮೇ 2023 (18:52 IST)
ಬೆಂಗಳೂರು: ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್ ಪಾಳಯ ಸೇರಿಕೊಂಡಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗೆ ಮತ್ತೆ ಪ್ರಶಾಂತ್ ಸಂಬರಗಿ ಟಾಂಗ್ ಕೊಟ್ಟಿದ್ದಾರೆ.

ಪ್ರಶಾಂತ್ ಮೊನ್ನೆಯಷ್ಟೇ ಶಿವರಾಜ್ ಕುಮಾರ್ ಹಣಕ್ಕಾಗಿ ಪ್ರಚಾರ ಮಾಡ್ತಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಆಕ್ಷೇಪಾರ್ಹ ಕಾಮೆಂಟ್ ಮಾಡಿದ್ದರು. ಇದಕ್ಕೆ ಕೋಪಗೊಂಡಿದ್ದ ಶಿವಣ್ಣ ನನಗೆ ಹಣದ ಅವಶ್ಯಕತೆಯಿಲ್ಲ. ಇಂತಹ ಹೇಳಿಕೆಗಳು ಅವರಿಗೆ ಶೋಭೆ ತರುವುದಿಲ್ಲ ಎಂದಿದ್ದರು.

ಆದರೆ ಇಷ್ಟಕ್ಕೇ ಸುಮ್ಮನಾಗದ ಪ್ರಶಾಂತ್ ಸಂಬರಗಿ ಮತ್ತೆ ಶಿವಣ್ಣನನ್ನು ಕೆಣಕಿದ್ದಾರೆ. ಶಿವಣ್ಣನಿಗೆ ಹತ್ತು ಪ್ರಶ್ನೆಗಳು ಎಂದು ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ಪೋಸ್ಟ್ ಮಾಡಿದ್ದಾರೆ. ನೀವೇ ಹಿಂದೂವಾಗಿ ಭಜರಂಗಿ ಹೆಸರಿನಲ್ಲಿ ನಟಿಸಿ ಕಾಂಗ್ರೆಸ್ ನವರ ಬಜರಂಗ ದಳ ನಿಷೇಧದ ಬಗ್ಗೆ ತಮ್ಮ ನಿಲುವು ಏನು? ಎಂದು ಪ್ರಶ್ನೆ ಮಾಡಿದ್ದಾರೆ.

ಇನ್ನು ದಿ ಕೇರಳ ಸ್ಟೋರಿ ಸಿನಿಮಾ ವಿರೋಧಿಸುವ, ದಿ ಕಾಶ್ಮೀರ ಫೈಲ್ಸ್ ಸಿನಿಮಾ ವಿರೋಧಿಸಿದ್ದ ಕಾಂಗ್ರೆಸ್ ನಿಲುವಿನ ಬಗ್ಗೆ ಮೌನ ವಹಿಸಿದ್ದೇಕೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ, ಡಬ್ಬಿಂಗ್ ವಿರೋಧಿಸಿ ಈಗ ಅನ್ಯ ಭಾಷೆಗಳಲ್ಲಿ ನಟಿಸುತ್ತಿರುವ ಬಗ್ಗೆ ಪ್ರಶ್ನಿಸಿದ್ದಾರೆ. ಇದಕ್ಕೆ ಈಗ ಶಿವಣ್ಣ ಉತ್ತರವೇನು ಎಂದು ಕಾದು ನೋಡಬೇಕಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸದ್ದು ಮಾಡುತ್ತಿದೆ ದಿ ಕೇರಳ ಸ್ಟೋರಿ: ಕೆಲವರಿಗೆ ಉಚಿತ ಶೋ ಆಫರ್!