Select Your Language

Notifications

webdunia
webdunia
webdunia
webdunia

ಶಿವಣ್ಣನ ಬಗ್ಗೆ ನೀಡಿದ್ದ ಹೇಳಿಕೆ ಹಿಂಪಡೆದ ಪ್ರಶಾಂತ್ ಸಂಬರಗಿ

ಶಿವಣ್ಣನ ಬಗ್ಗೆ ನೀಡಿದ್ದ ಹೇಳಿಕೆ ಹಿಂಪಡೆದ ಪ್ರಶಾಂತ್ ಸಂಬರಗಿ
ಬೆಂಗಳೂರು , ಸೋಮವಾರ, 8 ಮೇ 2023 (17:34 IST)
ಬೆಂಗಳೂರು: ಶಿವರಾಜ್ ಕುಮಾರ್ ಕಾಂಗ್ರೆಸ್ ಪರ ಚುನಾವಣಾ ಪ್ರಚಾರ ನಡೆಸುತ್ತಿರುವುದಕ್ಕೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪ್ರಶಾಂತ್ ಸಂಬರಗಿ ತಮ್ಮ ಹೇಳಿಕೆ ಹಿಂಪಡೆದಿದ್ದಾರೆ.

ಶಿವಣ್ಣ ಹಣಕ್ಕಾಗಿ ಸಿನಿಮಾ ಮಾಡ್ತಾರೆ, ಚುನಾವಣಾ ಪ್ರಚಾರ ಮಾಡ್ತಾರೆ ಎಂದು ಪ್ರಶಾಂತ್ ಸಂಬರಗಿ ಹೇಳಿಕೆ ನೀಡಿದ್ದರು. ಇದು ಶಿವಣ್ಣ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಸ್ವತಃ ಶಿವಣ್ಣ ಇಂತಹ ಹೇಳಿಕೆ ನೀಡಬಾರದು, ಹಿಂಪಡೆಯಬೇಕು ಎಂದಿದ್ದರು.

ಇದರ ಬೆನ್ನಲ್ಲೇ ಪ್ರಶಾಂತ್ ಸಂಬರಗಿ ತಮ್ಮ ಹೇಳಿಕೆ ಹಿಂಪಡೆದಿದ್ದಾರೆ. ಶಿವಣ್ಣ ಹಾಗೂ ಇನ್ನೋರ್ವ ಆಪ್ತಮಿತ್ರನೊಂದಿಗೆ ಈಗ ತಾನೇ ಮಾತನಾಡಿದೆ. ಶಿವಣ್ಣ ಅವರು ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಸ್ನೇಹಿತರನ್ನು ಹೊಂದಿದ್ದಾರೆ. ತಂದೆಯ ಬಯಕೆಯಂತೆ ಅವರು ರಾಜಕೀಯದಿಂದ ದೂರವಿದ್ದಾರೆ. ನಾನು ಅವರ ಬಗ್ಗೆ ಬರೆದಿರುವ ನನ್ನ ಪೋಸ್ಟ್ ಅನ್ನು ಹಿಂದಕ್ಕೆ ಹಿಂದಕ್ಕೆ ತೆಗೆದುಕೊಳ್ಳುತ್ತೇನೆ. ಶಿವಣ್ಣ ಮತ್ತು ಅಭಿಮಾನಿಗಳು ಬೇಸರ ಮಾಡಿಕೊಳ್ಳಬಾರದು’ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಲಾಲ್ ಸಲಾಂನಲ್ಲಿ ರಜನೀಕಾಂತ್ ಮೊಹಿದ್ದಿನ್ ಭಾಯ್ ಅವತಾರ