ತಮಿಳು ಚಿತ್ರದಲ್ಲಿ ನಟಿಸೋ ಆಸೆ ಇದೆ ಪ್ರಶಾಂತ್

ಗುರುಮೂರ್ತಿ
ಮಂಗಳವಾರ, 27 ಫೆಬ್ರವರಿ 2018 (13:35 IST)
ಒರಟ ಚಿತ್ರ ಎಂದ ಕೂಡಲೇ ನೆನಪಾಗೋದು ನಟ ಪ್ರಶಾಂತ್ ತಮ್ಮ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರ ಮನ ಗೆದ್ದ ಪ್ರಶಾಂತ್ ಇತ್ತೀಚಿನ ಹಲವು ಚಿತ್ರಗಳಲ್ಲಿ ನಟಿಸಿ ಎಲ್ಲಾ ಪಾತ್ರಗಳಿಗೂ ಸೈ ಎನಿಸಿಕೊಂಡಿರುವ ನಟ ಎಂದೇ ಹೇಳಬಹುದು.
ತಮ್ಮ ವಿಶಿಷ್ಟ ಮ್ಯಾನರಿಸಂ ಮೂಲಕ ಚಂದನವನದಲ್ಲಿ ಹೆಸರು ಮಾಡಿರುವ ಪ್ರಶಾಂತ ಈಗಾಗಲೇ ಹಲವಾರು ಸಿನೆಮಾಗಳಲ್ಲಿ ನಾಯಕ ನಟರಾಗಿ ಮಿಂಚಿದ್ದು, ಡೈಲಾಗ್ ರೈಟಿಂಗ್, ಸ್ಕ್ರೀನ್ ಪ್ಲೇ ನಲ್ಲೂ ತಮ್ಮ ಛಾಪನ್ನು ಮೂಡಿಸಿದ್ದಾರೆ.
 
ಇಂದು ನಡೆದ ವೆಬ್‌ದುನಿಯಾ ಕನ್ನಡ ಆನ್‌ಲೈನ್ ಪೋರ್ಟಲ್‌ ಸಂದರ್ಶನದಲ್ಲಿ ಮನಬಿಚ್ಚಿ ಮಾತನಾಡಿದ ಪ್ರಶಾಂತ್, ತಮ್ಮ ಚಿತ್ರರಂಗದ ಪ್ರವೇಶ ಹಾಗೂ ತಮ್ಮ ಸಿನೆಮಾಗಳ ಕುರಿತಾಗಿ ಮಾತನಾಡಿದರು. ಅಲ್ಲದೇ ಪ್ರಸ್ತುತವಾಗಿ ಯಾರಿಗೆ ಯಾರುಂಟು ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದು, ಅದರ ಎಡಿಟಿಂಗ್ ಕೆಲಸ ಬಾಕಿ ಇದೆ ಮತ್ತು ಈ ಚಿತ್ರ ಎಪ್ರಿಲ್‌ ತಿಂಗಳಿನಲ್ಲಿ ಬಿಡುಗಡೆಯಾಗಲಿದೆ ಎನ್ನುವ ಮಾತನ್ನು ಹೇಳಿದರು. ಅಷ್ಟೇ ಅಲ್ಲ ಈಗಾಗಲೇ ಕನ್ನಡವನ್ನು ಹೊರತುಪಡಿಸಿ ಇತರ ಭಾಷೆಗಳಲ್ಲೂ ಅವಕಾಶಗಳು ಬರುತ್ತಿರುವುದಾಗಿ ಹೇಳಿದ ಪ್ರಶಾಂತ್ ಒಳ್ಳೆಯ ಕಥೆಗಾಗಿ ಕಾಯುತ್ತಿದ್ದೇನೆ ಒಂದು ವೇಳೆ ಅಂತಹ ಕಥೆ ಏನಾದರೂ ಸಿಕ್ಕಿದಲ್ಲಿ ನಟಿಸುವ ಆಸೆಯಿದೆ ಎಂದು ಹೇಳಿದ್ದಾರೆ.
 
ಈಗಾಗಲೇ ತಮಿಳು ಚಿತ್ರವೊಂದರ ಕಥೆಯನ್ನು ಕೇಳಿದ್ದು ಅದರ ಕುರಿತು ಮಾತುಕಥೆ ನಡೆದಿದೆ. ಒಂದು ವೇಳೆ ಅದು ಪೂರ್ಣಗೊಂಡಲ್ಲಿ ತಮಿಳಿನ ಸಿನೆಮಾದಲ್ಲಿ ಅಭಿನಯಿಸುವುದಾಗಿ ತಿಳಿಸಿದರು.
 
ಇತ್ತೀಚಿನ ದಿನಗಳಲ್ಲಿ ಎಲ್ಲಾ ಭಾಷೆಯಲ್ಲೂ ಕನ್ನಡ ನಟರು ನಟಿಸುತ್ತಿರುವುದು ಸ್ಯಾಂಡಲ್‌ವೂಡ್‌‌ನ ಹೆಮ್ಮೆ ಎಂದೇ ಹೇಳಬಹುದು. ಅದೇ ಸಾಲಿಗೆ ಪ್ರಶಾಂತ್ ಕೂಡಾ ಸೇರುತ್ತಿದ್ದಾರೆ ಎಂಬುದು ಗಮನಾರ್ಹ. ಒಟ್ಟಿನಲ್ಲಿ ಅವರ ಮುಂಬರುವ ಸಿನೆಮಾವನ್ನು ನಿರೀಕ್ಷಿಸುತ್ತಿರುವ ಅಭಿಮಾನಿಗಳಿಗೆ ಎಪ್ರಿಲ್‌ನಲ್ಲಿ ಬಿಡುಗಡೆಯಾಗಲಿರುವ ಅವರ ಸಿನೆಮಾ ಹೇಗಿರಬಹುದು ಎಂಬ ಕುತೂಹಲ ಕಾಡುತ್ತಿರುವುದಂತು ಸುಳ್ಳಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments