ದರ್ಶನ್ ಗೆ ಪಾಪ ಏನೂ ಗೊತ್ತಿಲ್ಲ, ಬೆರಳು ತೋರಿಸಿದ್ದು ಈ ಕಾರಣಕ್ಕಂತೆ: ಕೆ ಮಂಜು ವಕಾಲತ್ತು

Sampriya
ಶುಕ್ರವಾರ, 13 ಸೆಪ್ಟಂಬರ್ 2024 (16:40 IST)
Photo Courtesy X
ಬೆಂಗಳೂರು: ದರ್ಶನ್‌ಗೆ ಕೈ ನೋವಾಗಿ ಆ ರೀತಿ ಮಾಡಿರಬಹುದು. ಆತ ಅಮಾಯಕ. ಮಾಧ್ಯಮಗಳು ಯಾಕೆ ಅವರ ಪ್ರತಿಯೊಂದು ವಿಚಾರದಲ್ಲೂ ತಪ್ಪು ಕಂಡುಹಿಡಿಯಲಿಕ್ಕೆ ಹೋಗುತ್ತದೆ ಎಂದು ನಿರ್ಮಾಪಕ ಕೆ ಮಂಜು ಹೇಳಿದರು.

ಗುರುವಾರ ಬಳ್ಳಾರಿ ಜೈಲಿನಲ್ಲಿ ದರ್ಶನ್ ಕ್ಯಾಮರಾಗಳಿಗೆ ಮಧ್ಯದ ಬೆರಳು ತೋರಿಸಿ ಅಸಭ್ಯವಾಗಿ ವರ್ತಿಸಿದ್ದರು. ಈ ವಿಚಾರವಾಗಿ ಕೆ ಮಂಜು ಬಳಿ ಖಾಸಗಿ ಮಾಧ್ಯಮವೊಂದು ಪ್ರಶ್ನಿಸಿದಾಗ , ಆತ ಬೇಲ್ ಆಗಿಲ್ಲ ಎಂಬ ಕಾರಣಕ್ಕೆ ಆ ರೀತಿ ವರ್ತಿಸಿರಬಹುದು. ಕೈ ನೋವಾಗಿಯೂ ಇರಬಹುದು, ಯಾರಿಗೆ ಗೊತ್ತು ಎಂದರು.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಯಾರಾದರು ತಪ್ಪು ಮಾಡಿದ್ರೆ ಕಾನೂನಿನ ಪ್ರಕಾರ ಶಿಕ್ಷೆಯಾಗುತ್ತದೆ. ದರ್ಶನ್ ಆರೋಪಿ, ಅಪರಾಧಿಯಲ್ಲ. ಇಂದು ಅವರು ಮಾಡಿರುವ ಒಳ್ಳೆಯ ಕೆಲಸಗಳು ಗೊತ್ತಾಗ್ತಿಲ್ಲ. ದರ್ಶನ್‌ ತುಂಬಾನೇ ಒಳ್ಳೆಯ ವ್ಯಕ್ತಿಯಾಗಿದ್ದು,  ದಾನ ಧರ್ಮ ಮಾಡುವುದರಲ್ಲಿ ಎತ್ತಿದ ಕೈ. ಇಂದು ಆತನಿಗೆ ಸುಮ್ಮನೇ ಅಭಿಮಾನಿಗಳಿಲ್ಲ. ಅವನು ಮಾಡುವ ದಾನ ಧರ್ಮ, ಒಳ್ಳೆಯ ಮನಸ್ಸಿನಿಂದಾಗಿ ಅಪಾರ ಅಭಿಮಾನಿಗಳನ್ನು ಗಳಿಸಿಕೊಂಡಿದ್ದಾನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಮುಂದಿನ ಸುದ್ದಿ
Show comments