Webdunia - Bharat's app for daily news and videos

Install App

ಗಾಯಕ ಸಂಜಿತ್ ಹೆಗ್ಡೆ ವಿರುದ್ಧ ಮತ್ತೆ ಕೆಂಡಕಾರಿದ ಕೆ ಮಂಜು: ಗೆಲ್ಲಿಸಿದವರನ್ನೇ ಮರೆತ ಆರೋಪ

Krishnaveni K
ಸೋಮವಾರ, 3 ಫೆಬ್ರವರಿ 2025 (11:00 IST)
Photo Credit: X
ಬೆಂಗಳೂರು: ಜೀ ಕನ್ನಡ ರಿಯಾಲಿಟಿ ಶೋ ಮೂಲಕ ಬೆಳಕಿಗೆ ಬಂದು ಈಗ ಬಾಲಿವುಡ್ ವರೆಗೆ ಅವಕಾಶ ಗಿಟ್ಟಿಸಿಕೊಂಡ ಕನ್ನಡದ ಗಾಯಕ ಸಂಜಿತ್ ಹೆಗ್ಡೆ ವಿರುದ್ಧ ನಿರ್ಮಾಪಕ ಕೆ ಮಂಜು ಮತ್ತೆ ಕಿಡಿ ಕಾರಿದ್ದಾರೆ.

ಸಂಜಿತ್ ಹೆಗ್ಡೆ ಕನ್ನಡದಿಂದಲೇ ಬೆಳೆದು ಬಂದವರು. ಈಗ ಕನ್ನಡ ಹಾಡು ಹಾಡಲು ದುಬಾರಿ ಸಂಭಾವನೆ ಕೇಳುತ್ತಿದ್ದಾರೆ ಎಂದು ಕೆ ಮಂಜು ಮೊನ್ನೆ ಮೊನ್ನೆಯಷ್ಟೇ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಮತ್ತೊಮ್ಮೆ ಸಂಜಿತ್ ಹೆಗ್ಡೆ ವಿರುದ್ಧ ಖಾಸಗಿ ವಾಹಿನಿಯಲ್ಲಿ ಕಿಡಿ ಕಾರಿದ್ದಾರೆ.

ಕೆಲವು ಗಾಯಕರು ತಮ್ಮ ಮೂಲ ಭಾಷೆಗೆ ಕಡಿಮೆ ಸಂಭಾವನೆ ಪಡೆಯುತ್ತಾರೆ. ಆದರೆ ಸಂಜಿತ್ ಹೆಗ್ಡೆ ಹಾಗಲ್ಲ. ಸಂಜಿತ್ ಕೂಡಾ ಕನ್ನಡಕ್ಕೆ ಕಡಿಮೆ ಸಂಭಾವನೆ ಕೇಳಬೇಕು. ಗೆಲ್ಲಿಸಿದವರನ್ನು ಮರೆಯಬಾರದು’ ಎಂದು ಕೆ ಮಂಜು ಹೇಳಿದ್ದಾರೆ.

ಅವರ ಈ ಕಾಮೆಂಟ್ ಗೆ ಹಲವು ಪರ-ವಿರೋಧ ಕಾಮೆಂಟ್ ಗಳು ವ್ಯಕ್ತವಾಗಿದೆ. ನಿಮಗೆ ಸಂಜಿತ್ ಹೆಗ್ಡೆ ಇಷ್ಟವಿಲ್ಲ ಎಂದರೆ ಅವರಂತೆ ಹಾಡುವ ಬೇರೆ ಸಾಕಷ್ಟು ಕನ್ನಡ ಪ್ರತಿಭೆಗಳಿದ್ದಾರೆ. ಅವರಿಗೆ ಅವಕಾಶ ಕೊಡಿ. ಅದು ಬಿಟ್ಟು ನಿತ್ಯವೂ ಮಾಧ್ಯಮಗಳಲ್ಲಿ ಸಂಜಿತ್ ವಿರುದ್ಧ ಆರೋಪ ಮಾಡುವುದರಲ್ಲಿ ಅರ್ಥವೇನಿದೆ ಎಂದಿದ್ದಾರೆ. ಇನ್ನು ಕೆಲವರು ಸಂಜಿತ್ ಕನ್ನಡಕ್ಕೆ ಮೊದಲ ಆದ್ಯತೆ ಕೊಡಲಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sonu Nigam: ವಿವಾದದ ಬಳಿಕ ಸೋನು ನಿಗಂ ಕನ್ನಡ ಬೆದರಿಕೆ ಕುರಿತು ಸ್ಪಷ್ಟನೆ ಕೊಟ್ಟಿದ್ದು ಹೀಗೆ

ಕನ್ನಡತನದ ಬಗ್ಗೆ ನಾಲಿಗೆ ಹರಿಬಿಟ್ಟಿದ್ದ ಗಾಯಕ ಸೋನು ನಿಗಮ್‌ಗೆ ಸಂಕಷ್ಟ: ದೂರು ದಾಖಲು

Harshika Poonaccha: ಮಗಳಿಗೆ ದೈವಿಕ ಹೆಸರಿಟ್ಟ ಹರ್ಷಿಕಾ ಪೂಣಚ್ಚ ದಂಪತಿ

ಎಡವಟ್ಟು ಮಾಡಿಕೊಂಡ ನಟ ವಿಜಯ್​ ದೇವರಕೊಂಡ: ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದೇಕೆ

Pahalgam Attack: ರೇಡಿಯೋ ಸ್ಟೇಷನ್‌ಗಳಲ್ಲಿ ಭಾರತೀಯ ಹಾಡುಗಳ ಪ್ರಸಾರ ನಿಲ್ಲಿಸಿದ ಪಾಕಿಸ್ತಾನ

ಮುಂದಿನ ಸುದ್ದಿ
Show comments