Webdunia - Bharat's app for daily news and videos

Install App

ದರ್ಶನ್ ಅರೆಸ್ಟ್, ಹಣ ಹೂಡಿದ ನಿರ್ಮಾಪಕರು ಕಂಗಾಲು

Krishnaveni K
ಬುಧವಾರ, 12 ಜೂನ್ 2024 (12:11 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಈಗ ಮೂರು ಬಿಗ್ ಬಜೆಟ್ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಈಗ ಆ ಸಿನಿಮಾಗಳ ಕತೆಯೇನು ಎಂಬ ಪ್ರಶ್ನೆ ಮೂಡಿದೆ.

ಇತ್ತೀಚೆಗಷ್ಟೇ ಕಾಟೇರ ಸಿನಿಮಾ ಸಕ್ಸಸ್ ಬಳಿಕ ದರ್ಶನ್ ಮಿಲನ ಪ್ರಕಾಶ್ ನಿರ್ದೇಶನದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ನಲ್ಲಿ ತೊಡಗಿಸಿಕೊಂಡಿದ್ದರು. ಅದು ದರ್ಶನ್ 57 ನೇ ಸಿನಿಮಾವಾಗಿತ್ತು. ಅದಿನ್ನೂ ಚಿತ್ರೀಕರಣ ಹಂತದಲ್ಲೇ ಇದೆ. ಇದರ ನಡುವೆ ಅವರಿಗೆ ಕೈ ನೋವಾಗಿದ್ದರಿಂದ ಕೆಲವು ದಿನ ಚಿತ್ರೀಕರಣ ಸ್ಥಗಿತಗೊಂಡಿತ್ತು.

ಇದರ ನಡುವೆ ನಿರ್ದೇಶಕ ಪ್ರೇಮ್ ಜೊತೆ ಒಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಇದಿನ್ನೂ ಆರಂಭವಾಗಿಲ್ಲ. ಪ್ರಿ ಪ್ರೊಡಕ್ಷನ್ ಹಂತದಲ್ಲಿದೆಯಷ್ಟೇ. ಜೋಗಿ ಪ್ರೇಮ್ ಸಿನಿಮಾ ಎಂದರೆ ಅದು ಬೇಗ ಅಂತೂ ಆರಂಭವಾಗಲ್ಲ. ಇದಲ್ಲದೆ ತರುಣ್ ಸುಧೀರ್ ಜೊತೆಗೂ ಒಂದು ಸಿನಿಮಾ ಮಾಡಲಿದ್ದಾರೆ. ಇದರ ಪೋಸ್ಟರ್ ಕೂಡಾ ಅವರ ಬರ್ತ್ ಡೇಗೆ ಬಿಡುಗಡೆಯಾಗಿತ್ತು.

ಇದೀಗ ದರ್ಶನ್ ಅರೆಸ್ಟ್ ಆಗಿರುವುದರಿಂದ ಈ ಮೂರೂ ಬಿಗ್ ಬಜೆಟ್ ಸಿನಿಮಾಗಳ ಕತೆಯೇನು ಎಂಬ ಪ್ರಶ್ನೆ ಮೂಡಿದೆ. ಒಂದು ವೇಳೆ ದರ್ಶನ್ ತಪ್ಪಿತಸ್ಥರೆಂದು ಸಾಬೀತಾದರೆ ಸಿನಿಮಾಗಳೆಲ್ಲವೂ ಅರ್ಧಕ್ಕೇ ನಿಲ್ಲಲಿವೆ. ದರ್ಶನ್ ಬಂಧಿತರಾಗಿರುವುದರಿಂದ ಈಗ ಅವರ ಮೇಲೆ ಹಣ ಹೂಡಿರುವ ನಿರ್ಮಾಪಕರು ಕಂಗಾಲಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ ಏನಿದೂ ದೀಪಿಕಾ ಪಡುಕೋಣೆ ಹವಾ: ಇನ್‌ಸ್ಟಾಗ್ರಾಂನಲ್ಲಿ ರೊನಾಲ್ಡೊ, ಪಾಂಡ್ಯರನ್ನೇ ಮೀರಿಸಿದ ಕನ್ನಡತಿ

ಡಿವೋರ್ಸ್ ವದಂತಿ ಬೆನ್ನಲ್ಲೇ ಹನ್ಸಿಕಾ ಇನ್‌ಸ್ಟಾಗ್ರಾಂನಲ್ಲಿ ಭಾರೀ ಬದಲಾವಣೆ

ಸ್ಯಾಂಡಲ್ ವುಡ್ ಯುವ ನಟ ಸಂತೋಷ್ ಬಾಲರಾಜ್ ನಿಧನ

ಶೆಟ್ಟಿ ಗ್ಯಾಂಗ್ ಎಂದವರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು ಗೊತ್ತಾ

ಸರ್ವಾಧಿಕಾರ, ಸನಾತನ ಸಂಕೋಲೆಯನ್ನು ಶಿಕ್ಷಣದಿಂದಷ್ಟೇ ಮುರಿಯಬಹುದು: ಕಮಲ್ ಹಾಸನ್

ಮುಂದಿನ ಸುದ್ದಿ
Show comments