ದರ್ಶನ್ ಅರೆಸ್ಟ್, ಹಣ ಹೂಡಿದ ನಿರ್ಮಾಪಕರು ಕಂಗಾಲು

Krishnaveni K
ಬುಧವಾರ, 12 ಜೂನ್ 2024 (12:11 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಈಗ ಮೂರು ಬಿಗ್ ಬಜೆಟ್ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಈಗ ಆ ಸಿನಿಮಾಗಳ ಕತೆಯೇನು ಎಂಬ ಪ್ರಶ್ನೆ ಮೂಡಿದೆ.

ಇತ್ತೀಚೆಗಷ್ಟೇ ಕಾಟೇರ ಸಿನಿಮಾ ಸಕ್ಸಸ್ ಬಳಿಕ ದರ್ಶನ್ ಮಿಲನ ಪ್ರಕಾಶ್ ನಿರ್ದೇಶನದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ನಲ್ಲಿ ತೊಡಗಿಸಿಕೊಂಡಿದ್ದರು. ಅದು ದರ್ಶನ್ 57 ನೇ ಸಿನಿಮಾವಾಗಿತ್ತು. ಅದಿನ್ನೂ ಚಿತ್ರೀಕರಣ ಹಂತದಲ್ಲೇ ಇದೆ. ಇದರ ನಡುವೆ ಅವರಿಗೆ ಕೈ ನೋವಾಗಿದ್ದರಿಂದ ಕೆಲವು ದಿನ ಚಿತ್ರೀಕರಣ ಸ್ಥಗಿತಗೊಂಡಿತ್ತು.

ಇದರ ನಡುವೆ ನಿರ್ದೇಶಕ ಪ್ರೇಮ್ ಜೊತೆ ಒಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಇದಿನ್ನೂ ಆರಂಭವಾಗಿಲ್ಲ. ಪ್ರಿ ಪ್ರೊಡಕ್ಷನ್ ಹಂತದಲ್ಲಿದೆಯಷ್ಟೇ. ಜೋಗಿ ಪ್ರೇಮ್ ಸಿನಿಮಾ ಎಂದರೆ ಅದು ಬೇಗ ಅಂತೂ ಆರಂಭವಾಗಲ್ಲ. ಇದಲ್ಲದೆ ತರುಣ್ ಸುಧೀರ್ ಜೊತೆಗೂ ಒಂದು ಸಿನಿಮಾ ಮಾಡಲಿದ್ದಾರೆ. ಇದರ ಪೋಸ್ಟರ್ ಕೂಡಾ ಅವರ ಬರ್ತ್ ಡೇಗೆ ಬಿಡುಗಡೆಯಾಗಿತ್ತು.

ಇದೀಗ ದರ್ಶನ್ ಅರೆಸ್ಟ್ ಆಗಿರುವುದರಿಂದ ಈ ಮೂರೂ ಬಿಗ್ ಬಜೆಟ್ ಸಿನಿಮಾಗಳ ಕತೆಯೇನು ಎಂಬ ಪ್ರಶ್ನೆ ಮೂಡಿದೆ. ಒಂದು ವೇಳೆ ದರ್ಶನ್ ತಪ್ಪಿತಸ್ಥರೆಂದು ಸಾಬೀತಾದರೆ ಸಿನಿಮಾಗಳೆಲ್ಲವೂ ಅರ್ಧಕ್ಕೇ ನಿಲ್ಲಲಿವೆ. ದರ್ಶನ್ ಬಂಧಿತರಾಗಿರುವುದರಿಂದ ಈಗ ಅವರ ಮೇಲೆ ಹಣ ಹೂಡಿರುವ ನಿರ್ಮಾಪಕರು ಕಂಗಾಲಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸ್ಟಾರ್ ನಟನ ಜತೆ ತೆಲುಗಿನಲ್ಲಿ ಬಿಗ್ ಆಫರ್ ಗಿಟ್ಟಿಸಿಕೊಂಡ ನಟಿ ಚೈತ್ರಾ ಆಚಾರ್‌

ಮತ್ತೇ ನಿರ್ಮಾಪಕ ಜತೆ ಕಾಣಿಸಿಕೊಂಡ ಸಮಂತಾ ರುತ್ ಪ್ರಭು, ಪ್ರೀತಿ ಪಕ್ಕಾ ಎಂದ ಫ್ಯಾನ್ಸ್‌

ನಿಶ್ಚಿತಾರ್ಥ ವದಂತಿ ಬೆನ್ನಲ್ಲೇ ಫ್ಯಾನ್ಸ್‌ಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ರಾ ರಶ್ಮಿಕಾ, ವಿಜಯ್ ದೇವರಕೊಂಡ

BB Season 12: ದೊಡ್ಮನೆಯಲ್ಲಿ ಸದ್ದು ಮಾಡುತ್ತಿರುವ ಸ್ಪರ್ಧಿ ವಿರುದ್ಧ ಬಿತ್ತು ಕೇಸ್‌

ದೀಪಾವಳಿ ಸಂದರ್ಭದಲ್ಲಿ ಗುಡ್‌ನ್ಯೂಸ್ ಹಂಚಿಕೊಂಡ ನಟ ರಾಮ್‌ ಚರಣ್, ಉಪಾಸನಾ ದಂಪತಿ

ಮುಂದಿನ ಸುದ್ದಿ
Show comments