Webdunia - Bharat's app for daily news and videos

Install App

ದರ್ಶನ್ ಅರೆಸ್ಟ್, ಹಣ ಹೂಡಿದ ನಿರ್ಮಾಪಕರು ಕಂಗಾಲು

Krishnaveni K
ಬುಧವಾರ, 12 ಜೂನ್ 2024 (12:11 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಈಗ ಮೂರು ಬಿಗ್ ಬಜೆಟ್ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಈಗ ಆ ಸಿನಿಮಾಗಳ ಕತೆಯೇನು ಎಂಬ ಪ್ರಶ್ನೆ ಮೂಡಿದೆ.

ಇತ್ತೀಚೆಗಷ್ಟೇ ಕಾಟೇರ ಸಿನಿಮಾ ಸಕ್ಸಸ್ ಬಳಿಕ ದರ್ಶನ್ ಮಿಲನ ಪ್ರಕಾಶ್ ನಿರ್ದೇಶನದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ನಲ್ಲಿ ತೊಡಗಿಸಿಕೊಂಡಿದ್ದರು. ಅದು ದರ್ಶನ್ 57 ನೇ ಸಿನಿಮಾವಾಗಿತ್ತು. ಅದಿನ್ನೂ ಚಿತ್ರೀಕರಣ ಹಂತದಲ್ಲೇ ಇದೆ. ಇದರ ನಡುವೆ ಅವರಿಗೆ ಕೈ ನೋವಾಗಿದ್ದರಿಂದ ಕೆಲವು ದಿನ ಚಿತ್ರೀಕರಣ ಸ್ಥಗಿತಗೊಂಡಿತ್ತು.

ಇದರ ನಡುವೆ ನಿರ್ದೇಶಕ ಪ್ರೇಮ್ ಜೊತೆ ಒಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಇದಿನ್ನೂ ಆರಂಭವಾಗಿಲ್ಲ. ಪ್ರಿ ಪ್ರೊಡಕ್ಷನ್ ಹಂತದಲ್ಲಿದೆಯಷ್ಟೇ. ಜೋಗಿ ಪ್ರೇಮ್ ಸಿನಿಮಾ ಎಂದರೆ ಅದು ಬೇಗ ಅಂತೂ ಆರಂಭವಾಗಲ್ಲ. ಇದಲ್ಲದೆ ತರುಣ್ ಸುಧೀರ್ ಜೊತೆಗೂ ಒಂದು ಸಿನಿಮಾ ಮಾಡಲಿದ್ದಾರೆ. ಇದರ ಪೋಸ್ಟರ್ ಕೂಡಾ ಅವರ ಬರ್ತ್ ಡೇಗೆ ಬಿಡುಗಡೆಯಾಗಿತ್ತು.

ಇದೀಗ ದರ್ಶನ್ ಅರೆಸ್ಟ್ ಆಗಿರುವುದರಿಂದ ಈ ಮೂರೂ ಬಿಗ್ ಬಜೆಟ್ ಸಿನಿಮಾಗಳ ಕತೆಯೇನು ಎಂಬ ಪ್ರಶ್ನೆ ಮೂಡಿದೆ. ಒಂದು ವೇಳೆ ದರ್ಶನ್ ತಪ್ಪಿತಸ್ಥರೆಂದು ಸಾಬೀತಾದರೆ ಸಿನಿಮಾಗಳೆಲ್ಲವೂ ಅರ್ಧಕ್ಕೇ ನಿಲ್ಲಲಿವೆ. ದರ್ಶನ್ ಬಂಧಿತರಾಗಿರುವುದರಿಂದ ಈಗ ಅವರ ಮೇಲೆ ಹಣ ಹೂಡಿರುವ ನಿರ್ಮಾಪಕರು ಕಂಗಾಲಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಥಗ್ ಲೈಫ್ ಮೂವಿಗೆ ನಿಷೇಧ: ಬೆಂಗಳೂರಿನ ಕಮಲ್ ಹಾಸನ್ ಪ್ರೇಮಿ ಮಾಡಿದ್ದೇನು ಗೊತ್ತಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

Vaishnavi Gowda: ಮದುವೆ ಸಂಗೀತ್ ಕಾರ್ಯಕ್ರಮವನ್ನೂ ಮರೆತು ಆರ್ ಸಿಬಿ ಮ್ಯಾಚ್ ನೋಡಿದ ವೈಷ್ಣವಿ ಗೌಡ

ಮುಂದಿನ ಸುದ್ದಿ
Show comments