ದರ್ಶನ್ ಬಳಿಕ ಬಂಡೀಪುರಕ್ಕಾಗಿ ಪುನೀತ್ ರಾಜ್ ಕುಮಾರ್ ಮೊರೆ

Webdunia
ಸೋಮವಾರ, 25 ಫೆಬ್ರವರಿ 2019 (09:57 IST)
ಬೆಂಗಳೂರು: ಬಂಡೀಪುರ ಅರಣ್ಯ ವಲಯದಲ್ಲಿ ಉಂಟಾಗಿರುವ ಕಾಡ್ಗಿಚ್ಚಿನಿಂದ ನೂರಾರು ವನ್ಯ ಸಂಕುಲಗಳಿಗೆ ಅಪಾಯವಾಗಿರುವ ಹಿನ್ನಲೆಯಲ್ಲಿ ಚಿತ್ರನಟರು ಕಾಡಿನ ಉಳಿವಿಗಾಗಿ ಕರೆ ಕೊಟ್ಟಿದ್ದಾರೆ.


ಪ್ರಾಣಿ ಪ್ರಿಯರಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಿನ್ನೆಯೇ ಕಾಡ್ಗಿಚ್ಚಿನಿಂದ ವನ್ಯ ಜೀವಿಗಳನ್ನು ಸಂರಕ್ಷಿಸಲು ಸಹಾಯ ಮಾಡಲು ಮನಸ್ಸಿದ್ದರೆ ಕೈ ಜೋಡಿಸಿ ಎಂದು ಟ್ವಿಟರ್ ಮೂಲಕ ಮನವಿ ಮಾಡಿದ್ದರು.

ಇದೀಗ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೂಡಾ ಅದೇ ಕೆಲಸ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅಪ್ಪು ‘ಬಂಡೀಪುರದಲ್ಲಿ ಉಂಟಾಗಿರುವ ಕಾಡ್ಗಿಚ್ಚಿನಿಂದ ಅರಣ್ಯ ಸಂಪತ್ತು ಮತ್ತು ವನ್ಯ ಜೀವಿಗಳು ಸಂಕಷ್ಟಕ್ಕೀಡಾಗಿವೆ. ಅರಣ್ಯ ಇಲಾಖೆ ಮತ್ತು ಸ್ವಯಂಸೇವಕರ ಜತೆ ನಾವೂ ಕೈ ಜೋಡಿಸೋಣ.  ‘ಕಾಡಿದ್ದರೆ ನಾಡು, ನಾವು’ ವನ್ಯ ಜೀವಿಗಳ ರಕ್ಷಣೆ ನಮ್ಮ ಹೊಣೆ. ಮನುಷ್ಯನ ಹಾಗೇ ಗಿಡ ಮರ ಮತ್ತು ವನ್ಯ ಜೀವಿಗಳೂ ಒಂದು ಜೀವವೇ’ ಎಂದು ಮನವಿ ಮಾಡಿದ್ದಾರೆ.

ಸದ್ಯಕ್ಕೆ ಬಂಡೀಪುರ ಅರಣ್ಯ ವಲಯದಲ್ಲಿ ಸ್ಥಿತಿ ಗತಿ ಗಂಭೀರವಾಗಿದ್ದು, ನೂರಾರು ವನ್ಯ ಜೀವಿಗಳು ಪ್ರಾಣ ಕಳೆದುಕೊಂಡಿವೆ. ಕೇರಳ ಗಡಿಭಾಗಕ್ಕೂ ಬೆಂಕಿ ವ್ಯಾಪಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಮಾಡಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್‌ಗೆ ಜೀವಾವಧಿ ಕೊಟ್ರು ಓಕೆ, ದರ್ಶನ್ ಪರ ವಕೀಲರ ವಾದ ಹೀಗಿತ್ತು

ಮಾಜಿ ಗೆಳತಿಯ ಮುಖದಲ್ಲಿ ಸದಾ ನಗುವನ್ನು ಬಯಸಿದ ನಟ ಅರ್ಜುನ್ ಕಪೂರ್

BBK12: ಕಳಪೆ ಕೊಟ್ಟಿದ್ದಕ್ಕೆ ದುರಹಂಕಾರ ತೋರಿಸ್ತಿದ್ದಾರಾ ಅಶ್ವಿನಿ ಗೌಡ

ಹಿಟ್ ಆ್ಯಂಡ್ ರನ್ ಕೇಸ್ ಸಂಬಂಧ ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಕಾಂತಾರ ವೀಕ್ಷಿಸಿದ ಅಲ್ಲು ಅರ್ಜುನ್, ಸಿನಿಮಾ ಬಗ್ಗೆ ಹೀಗೆ ಬರೆದಿದ್ದಾರೆ

ಮುಂದಿನ ಸುದ್ದಿ
Show comments