Publish Date: Fri, 29 Oct 2021 (13:58 IST)
Updated Date: Fri, 29 Oct 2021 (14:00 IST)
ಬೆಂಗಳೂರು: ತೀವ್ರ ಹೃದಯಾಘಾತಕ್ಕೊಳಗಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆರೋಗ್ಯ ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದ್ದು, ಕೆಲವೇ ಕ್ಷಣಗಳಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ನಟ, ಸಹೋದರ ಶಿವರಾಜ್ ಕುಮಾರ್ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.
ಇದೀಗ ಅಂತಿಮ ಹಂತದ ಚಿಕಿತ್ಸೆ ನೀಡಲಾಗುತ್ತಿದ್ದು, ಕೆಲವೇ ಕ್ಷಣಗಳಲ್ಲಿ ಅಧಿಕೃತ ಮಾಹಿತಿ ದೊರೆಯಲಿದೆ. ಇನ್ನು, ಖುದ್ದು ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, ನಟರಾದ ರವಿಚಂದ್ರನ್, ಶಿವರಾಜ್ ಕುಮಾರ್, ಸೇರಿದಂತೆ ಹಲವಾರು ನಟ-ನಟಿಯರು ಆಸ್ಪತ್ರೆಗೆ ಧಾವಿಸಿದ್ದಾರೆ.
ಇನ್ನು, ಪುನೀತ್ ನಿವಾಸದಲ್ಲಿ ದುಃಖ ಮಡಗಟ್ಟಿದ್ದು, ಸುರಕ್ಷತೆ ದೃಷ್ಟಿಯಿಂದ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಆಸ್ಪತ್ರೆ ಬಳಿಯೂ ಅಭಿಮಾನಿಗಳ ದುಃಖ ಮೇರೆ ಮೀರಿದೆ.