Select Your Language

Notifications

webdunia
webdunia
webdunia
webdunia

ಮೊಹಮ್ಮದ್ ಹ್ಯಾರಿಸ್ ನಿಂದ ಹಲ್ಲೆಗೊಳಗಾದ ವಿದ್ವತ್ ಭೇಟಿ ಮಾಡಿದ ಪುನೀತ್ ರಾಜ್ ಕುಮಾರ್

ಮೊಹಮ್ಮದ್ ಹ್ಯಾರಿಸ್ ನಿಂದ ಹಲ್ಲೆಗೊಳಗಾದ ವಿದ್ವತ್ ಭೇಟಿ ಮಾಡಿದ ಪುನೀತ್ ರಾಜ್ ಕುಮಾರ್
ಬೆಂಗಳೂರು , ಬುಧವಾರ, 21 ಫೆಬ್ರವರಿ 2018 (06:32 IST)
ಬೆಂಗಳೂರು : ಇತ್ತಿಚೆಗೆ ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರನಿಂದ ಹಲ್ಲೆಗೊಳಗಾದ ವಿದ್ವತ್ ಅವರ ಆರೋಗ್ಯ ವಿಚಾರಿಸಲು ಅವರು ಚಿಕಿತ್ಸೆ ಪಡೆಯುತ್ತಿರೋ  ಆಸ್ಪತ್ರೆಗೆ ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ಅವರು ಮಂಗಳವಾರ  ಭೇಟಿ ನೀಡಿದ್ದಾರೆ.


ಹಲ್ಲೆಗೊಳಗಾದ ವಿದ್ವತ್ ಅವರು  ರಾಘವೇಂದ್ರ ರಾಜ್‍ಕುಮಾರ್ ಪುತ್ರನ ಸ್ನೇಹಿತರಾಗಿದ್ದು, ಅವರ ಸ್ಥಿತಿ ನೋಡಿ ನಟ ಪುನೀತ್ ರಾಜ್ ಕುಮಾರ್ ಅವರು ಕಣ್ಣೀರು ಹಾಕಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಪುನೀತ್ ಅವರು , ‘ಹಲ್ಲೆಗೊಳಗಾದ ವಿದ್ವತ್ ಫ್ಯಾಮಿಲಿ ಫ್ರೆಂಡ್. ಆತನನ್ನು ನಾನು ಚಿಕ್ಕಂದಿನಿಂದಲೇ ನೋಡಿದ್ದೀನಿ. ಆತನು ನನಗೆ ಪರಿಚಯ. ಸದ್ಯ ಆತ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದಾನೆ. ವಿದ್ವತ್ ನನ್ನ ತಮ್ಮನ ಹಾಗೆ. ಕಾನೂನಿಗಿಂತ ಯಾರು ದೊಡ್ಡವರಲ್ಲ. ತಪ್ಪಿತಸ್ಥಿರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಲಿ ಅಂತ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನಟ ಚಂದನ್ ಸಿನಿಮಾ ವಿಮರ್ಶಕರ ವಿರುದ್ಧ ಮಾತನಾಡಿದ್ದು ಯಾಕೆ ಗೊತ್ತಾ?