Webdunia - Bharat's app for daily news and videos

Install App

ಸಂತೋಷ್ ಆನಂದ್ ರಾಮ್‌ಗೆ ಪುನೀತ್ ಗ್ರೀನ್ ಸಿಗ್ನಲ್

Webdunia
ಬುಧವಾರ, 4 ಮಾರ್ಚ್ 2015 (09:42 IST)
ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿಯ ಮೂಲಕ ಗೆಲುವಿನ ಪತಾಕೆ ಹಾರಿಸಿರುವ ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರು ಈಗ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಸಿನಿಮಾ ನಿರ್ದೇಶನ ಮಾಡುವತ್ತ ಚಿತ್ತ ನೆಟ್ಟಿದ್ದಾರೆ. ಅವರ ಮುಂದಿನ ಚಿತ್ರದಲ್ಲಿ ಪುನೀತ್ ಅಭಿನಯಿಸುತ್ತಿದ್ದಾರೆ. ಇತ್ತೀಚಿಗೆ ನಡೆದ ಮೈತ್ರಿ ಪ್ರೆಸ್ ಮೀಟ್ ನಲ್ಲಿ ಪುನೀತ್ ದೊಡ್ಡಮನೆ ಹುಡುಗ ಚಿತ್ರ ಮಾಡುವುದಾಗಿ ಹೇಳಿದ್ದರು. ಉಳಿದ ಸಿನಿಮಾಗಳ ಬಗ್ಗೆ ತಿಳಿಸಿರಲಿಲ್ಲ. 
ಆದರೆ ಸೋಮವಾರ ಮಧ್ಯಾಹ್ನ ಸಂತೋಷ್ ಆನಂದ್ ರಾಮ್ ಅವರು ಪುನೀತ್ ತಮ್ಮ ಚಿತ್ರದಲ್ಲಿ ನಟಿಸಲು ಸಮ್ಮತಿ ಮುದ್ರೆ ನೀಡಿರುವುದಾಗಿ ಹೇಳಿ ಈ ಚಿತ್ರ ದೊಡ್ಡಮನೆ ಹುಡುಗ ಆದ ಬಳಿಕ ಕೆಲಸ ಆರಂಭ ಮಾಡುತ್ತದೆ ಎನ್ನುವ ಸಂಗತಿ ಹೇಳಿದ್ದಾರೆ. ಅಂದರೆ ಈ ವರ್ಷದ ಕೊನೆಯಲ್ಲಿ ಚಿತ್ರದ ಕೆಲಸ ಆರಂಭವಾಗುತ್ತದೆ. ಈಗ ಚಿತ್ರಕಥೆಯ ಕೆಲಸದಲ್ಲಿ ಮಗ್ನರಾಗಿದ್ದು, ಶೂಟಿಂಗ್ ಆರಂಭವಾಗಲು ಸಾಕಷ್ಟು ಸಮಯ ಇರುವುದಾಗಿ ಸಹಿತ ಹೇಳಿದ್ದಾರೆ. ಈ ಚಿತ್ರಕ್ಕೆ ನಿನ್ನಿಂದಲೇ ಚಿತ್ರ ನಿರ್ಮಿಸಿದ್ದ ವಿಜಯ್ ಕಿರಿಂಗದೂರ್ ಅವರು ಹಣ ಹೂಡಲಿದ್ದಾರೆ ಎಂದು ಸತೊಶ್ ಹೇಳಿದ್ದಾರೆ.ಪ್ರಸ್ತುತ ವಿಜಯ್ ಅವರು ಯಶ್ ನಟನೆಯ ಮಾಸ್ಟರ್ ಪೀಸ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.  

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments