Webdunia - Bharat's app for daily news and videos

Install App

ಟೀಕೆಯ ಬೆನ್ನಲ್ಲೆ ಅಲ್ಲು ಅರ್ಜುನ್‌ ಹಾಡಿರುವ ಪುಷ್ಪ 2 ಸಿನಿಮಾದ ದಮ್ಮುಂಟೆ ಪಟ್ಟುಕೊರಾ ಹಾಡಿಗೆ ಕತ್ತರಿ

Sampriya
ಶುಕ್ರವಾರ, 27 ಡಿಸೆಂಬರ್ 2024 (10:52 IST)
Photo Courtesy X
ಹೈದರಾಬಾದ್‌: ಅಲ್ಲು ಅರ್ಜುನ್‌ ಅಭಿನಯದ ಪುಷ್ಪ 2 ಸಿನಿಮಾದ ದಮ್ಮಿದ್ರೆ ನನ್ನನ್ನು ಹಿಡಿಯಿರಿ ಹಾಡು ಟೀಕೆಗೆ ಗುರಿಯಾದ ಬೆನ್ನಲ್ಲೇ  ಎಲ್ಲಾ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳು ಮತ್ತು ಯೂಟ್ಯೂಬ್‌ನಿಂದ ಆ ಹಾಡನ್ನು ತೆಗೆದುಹಾಕಿದೆ.

ಅಲ್ಲು ಅರ್ಜುನ್‌ ಹಾಡಿರುವ ದಮ್ಮುಂಟೆ ಪಟ್ಟುಕೊರಾ ಹಾಡು ಡಿಸೆಂಬರ್ 24 ರಂದು ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿತ್ತು. ಪುಷ್ಪ 2 ಚಿತ್ರದಲ್ಲಿ ಅಲ್ಲು ಅರ್ಜುನ್ ರಕ್ತ ಚಂದನ ಕಳ್ಳಸಾಗಣೆದಾರರ ಸಿಂಡಿಕೇಟ್​ನ ಮುಖಂಡ. ಚಿತ್ರದಲ್ಲಿ ಅಲ್ಲು ಅರ್ಜುನ್ ಅನ್ನು ಹಿಡಿಯಲು ಪೊಲೀಸ್ (ಶೇಖಾವತ್) ಒಬ್ಬ ಬಹಳ ಪ್ರಯತ್ನ ಪಡುತ್ತಿರುತ್ತಾನೆ.  

ದೃಶ್ಯವೊಂದರಲ್ಲಿ ಶೆಖಾವತ್​ಗೆ ಸವಾಲು ಹಾಕುವ ಪುಷ್ಪ  ದಮ್ಮಿದ್ರೆ ನನ್ನನ್ನು ಹಿಡಿಯಿರಿ ಎಂದು ಪೊಲೀಸ್‌ ಅಧಿಕಾರಿ ಶೇಖಾವತ್‌ಗೆ ಎಂದು ಹಾಡು ಹೇಳುತ್ತಾ ಸವಾಲು ಹಾಕುತ್ತಾನೆ. ಈ ಸಾಲು ಟೀಕೆಗೆ ಗುರಿಯಾಗಿತ್ತು. ಪೊಲೀಸರನ್ನು ಗೇಲಿ ಮಾಡಲಾಗಿದೆ ಎಂದೂ ಹೇಳಲಾಗಿತ್ತು.

ಕಾಲ್ತುಳಿತ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್ ಬಂಧನ ಹಾಗೂ ನಂತರದ ಬೆಳವಣಿಗೆಗಳ ನಡುವೆ ಚಿತ್ರ ತಂಡ ಈ ಹಾಡಿಗೆ ಕತ್ತರಿ ಹಾಕಿದೆ.

ಇನ್ನು ವಿವಾದಗಳ ನಡುವೆಯೇ ಪುಷ್ಪ 2 ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಡಿಸೆಂಬರ್ 5 ರಂದು ಬಿಡುಗಡೆಯಾದ ಈ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ 21 ದಿನಗಳನ್ನು ಪೂರೈಸಿದೆ.  ₹ 1600 ಕೋಟಿ ಗಳಿಕೆ ಮಾಡಿ ಮುನ್ನುಗ್ಗುತ್ತಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments