Allu Arjun arrest: ಪುಷ್ಪ 2 ಸ್ಟಾರ್ ಅಲ್ಲು ಅರ್ಜುನ್ ರನ್ನು ಬಂಧಿಸಿದ ಪೊಲೀಸರು

Krishnaveni K
ಶುಕ್ರವಾರ, 13 ಡಿಸೆಂಬರ್ 2024 (13:16 IST)
ಹೈದರಾಬಾದ್: ಇತ್ತೀಚೆಗಷ್ಟೇ ಬಿಡುಗಡೆಯಾದ ಸೂಪರ್ ಹಿಟ್ ಚಿತ್ರ ಪುಷ್ಪ 2 ನಟ ಅಲ್ಲು ಅರ್ಜುನ್ ರನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯೊಬ್ಬರ ಸಾವಿಗೆ ಕಾರಣರಾದ ಹಿನ್ನಲೆಯಲ್ಲಿ ಅವರನ್ನು ಬಂಧಿಸಲಾಗಿದೆ.

ಪುಷ್ಪ 2 ಸಿನಿಮಾ ಬಿಡುಗಡೆ ಸಂದರ್ಭದಲ್ಲಿ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಟನನ್ನು ನೋಡಲು ನೂಕು ನುಗ್ಗಲು ಉಂಟಾಗಿತ್ತು. ಕಾಲ್ತುಳಿತದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದರು. ಈ ಸಂಬಂಧ ಅಲ್ಲು ಅರ್ಜುನ್ ವಿರುದ್ಧ ದೂರು ದಾಖಲಾಗಿತ್ತು.

ಪ್ರಕರಣ ಕುರಿತು ಚೀಕಟಪಲ್ಲಿ ಪೊಲೀಸರು ಉತ್ತರ ನೀಡುವಂತೆ ಅಲ್ಲು ಅರ್ಜುನ್ ಗೆ ನೋಟಿಸ್ ನೀಡಿದ್ದರು. ಆದರೂ ಅವರು ಉತ್ತರಿಸಿರಲಿಲ್ಲ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಅಲ್ಲು ಅರ್ಜುನ್ ಮತ್ತು ಅವರ ಇಬ್ಬರು ಬಾಡಿ ಗಾರ್ಡ್ ಗಳನ್ನೂ ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಬಂದಿದೆ.

ಈಗಾಗಲೇ ಅಲ್ಲು ಅರ್ಜುನ್ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಮಾಡುವಂತೆ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಆದರೆ ಅದಿನ್ನೂ ವಿಚಾರಣೆಯಾಗಿಲ್ಲ. ಈ ನಡುವೆ ಮೃತರ ಕುಟುಂಬಕ್ಕೆ ಅಲ್ಲು ಅರ್ಜುನ್ ಧನ ಸಹಾಯವನ್ನೂ ಮಾಡಿದ್ದರು. ಆದರೆ ಇದು ಯಾವುದೂ ಅವರ ಬಂಧನದ ಮೇಲೆ ಪರಿಣಾಮ ಬೀರಿಲ್ಲ. ನೇರವಾಗಿ ಅಲ್ಲು ನಿವಾಸಕ್ಕೆ ತೆರಳಿ ಅವರ ಬೆಡ್ ರೂಂನಿಂದಲೇ ನಟನನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ. ಈ ವೇಳೆ ಅವರು ಪೊಲೀಸರ ವಿರುದ್ಧ ಅಸಹನೆ ತೋರಿದ್ದರು. ಅವರ ತಂದೆ ಅಲ್ಲು ಅರವಿಂದ್ ಕೂಡಾ ಮಗನ ಬಂಧನ ತಡೆಯುವ ಯತ್ನ ಮಾಡಿದ್ದಾರೆ. ಒಟ್ಟಿನಲ್ಲಿ ಬಂಧನ ವೇಳೆ ಸಣ್ಣ ಡ್ರಾಮಾವೇ ನಡೆದಿದೆ ಎನ್ನಲಾಗಿ.ದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅ.25ರಂದು ಅಪ್ಪು ಫ್ಯಾನ್‌ ಡಮ್‌ ಆ್ಯಪ್‌ ಬಿಡುಗಡೆ: ಕಿಚ್ಚ ಸುದೀಪ್ ಧ್ವನಿಯಲ್ಲಿ ಹೊರಬಿತ್ತು ಟ್ರೇಲರ್

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

BBK12: ಕಿಚ್ಚ ಸುದೀಪ್ ಯಾರಿಗೂ ಹೆದರಲ್ಲ, ಅಶ್ವಿನಿ ಪರವೂ ಅಲ್ಲ: ಇಂದು ಕಾದಿದೆ ಮಾರಿಹಬ್ಬ

ಕೆಬಿಸಿ ಶೋನಲ್ಲಿ ರಿಷಬ್ ಶೆಟ್ಟಿ ಗೆದ್ದಿದ್ದೆಷ್ಟು, ಈ ಹಣ ಯಾರಿಗೆ ಕೊಟ್ರು ನೋಡಿ

ಮುಂದಿನ ಸುದ್ದಿ
Show comments