Allu Arjun arrest: ಪುಷ್ಪ 2 ಸ್ಟಾರ್ ಅಲ್ಲು ಅರ್ಜುನ್ ರನ್ನು ಬಂಧಿಸಿದ ಪೊಲೀಸರು

Krishnaveni K
ಶುಕ್ರವಾರ, 13 ಡಿಸೆಂಬರ್ 2024 (13:16 IST)
ಹೈದರಾಬಾದ್: ಇತ್ತೀಚೆಗಷ್ಟೇ ಬಿಡುಗಡೆಯಾದ ಸೂಪರ್ ಹಿಟ್ ಚಿತ್ರ ಪುಷ್ಪ 2 ನಟ ಅಲ್ಲು ಅರ್ಜುನ್ ರನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯೊಬ್ಬರ ಸಾವಿಗೆ ಕಾರಣರಾದ ಹಿನ್ನಲೆಯಲ್ಲಿ ಅವರನ್ನು ಬಂಧಿಸಲಾಗಿದೆ.

ಪುಷ್ಪ 2 ಸಿನಿಮಾ ಬಿಡುಗಡೆ ಸಂದರ್ಭದಲ್ಲಿ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಟನನ್ನು ನೋಡಲು ನೂಕು ನುಗ್ಗಲು ಉಂಟಾಗಿತ್ತು. ಕಾಲ್ತುಳಿತದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದರು. ಈ ಸಂಬಂಧ ಅಲ್ಲು ಅರ್ಜುನ್ ವಿರುದ್ಧ ದೂರು ದಾಖಲಾಗಿತ್ತು.

ಪ್ರಕರಣ ಕುರಿತು ಚೀಕಟಪಲ್ಲಿ ಪೊಲೀಸರು ಉತ್ತರ ನೀಡುವಂತೆ ಅಲ್ಲು ಅರ್ಜುನ್ ಗೆ ನೋಟಿಸ್ ನೀಡಿದ್ದರು. ಆದರೂ ಅವರು ಉತ್ತರಿಸಿರಲಿಲ್ಲ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಅಲ್ಲು ಅರ್ಜುನ್ ಮತ್ತು ಅವರ ಇಬ್ಬರು ಬಾಡಿ ಗಾರ್ಡ್ ಗಳನ್ನೂ ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಬಂದಿದೆ.

ಈಗಾಗಲೇ ಅಲ್ಲು ಅರ್ಜುನ್ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಮಾಡುವಂತೆ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಆದರೆ ಅದಿನ್ನೂ ವಿಚಾರಣೆಯಾಗಿಲ್ಲ. ಈ ನಡುವೆ ಮೃತರ ಕುಟುಂಬಕ್ಕೆ ಅಲ್ಲು ಅರ್ಜುನ್ ಧನ ಸಹಾಯವನ್ನೂ ಮಾಡಿದ್ದರು. ಆದರೆ ಇದು ಯಾವುದೂ ಅವರ ಬಂಧನದ ಮೇಲೆ ಪರಿಣಾಮ ಬೀರಿಲ್ಲ. ನೇರವಾಗಿ ಅಲ್ಲು ನಿವಾಸಕ್ಕೆ ತೆರಳಿ ಅವರ ಬೆಡ್ ರೂಂನಿಂದಲೇ ನಟನನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ. ಈ ವೇಳೆ ಅವರು ಪೊಲೀಸರ ವಿರುದ್ಧ ಅಸಹನೆ ತೋರಿದ್ದರು. ಅವರ ತಂದೆ ಅಲ್ಲು ಅರವಿಂದ್ ಕೂಡಾ ಮಗನ ಬಂಧನ ತಡೆಯುವ ಯತ್ನ ಮಾಡಿದ್ದಾರೆ. ಒಟ್ಟಿನಲ್ಲಿ ಬಂಧನ ವೇಳೆ ಸಣ್ಣ ಡ್ರಾಮಾವೇ ನಡೆದಿದೆ ಎನ್ನಲಾಗಿ.ದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುರುತಿಸಲಾಗದಂತಹ ರೂಪದಲ್ಲಿ ಸಲ್ಮಾನ್ ಖಾನ್, ಬಾಲಿವುಡ್‌ ಸುಲ್ತಾನ್ ಹೊಸ ಲುಕ್ ಕಂಡು ಅಭಿಮಾನಿಗಳು ಶಾಕ್, Video

ಬಾಲಿವುಡ್‌ ಅಂಗಳದಲ್ಲಿ ಯಶ್ ಕನ್ನಡದ ಕಂಪು, ರಾಮಾಯಣ ವೇದಿಕೆ ಹತ್ತುತ್ತಿದ್ದ ಹಾಗೇ ರಾಕಿ ಬಾಯ್ ಮಾಡಿದ ಕೆಲಸಕ್ಕೆ ಕನ್ನಡಿಗರು ಫಿದಾ, Video

ಲವ್‌ ಜಿಹಾದ್‌ಗೆ ಉತ್ತೇಜನ, ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಮೀರ್ ಖಾನ್‌ಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಹಂಸಲೇಖಾರಿಗೆ ಪದ್ಮ ಪ್ರಶಸ್ತಿ ಇಲ್ಲವೇ ಜ್ಞಾನ ಪೀಠ ಕೊಡಬೇಕು ಎಂದು ನೆನಪಿರಲಿ ಪ್ರೇಮ್ ಅಭಿಯಾನ: ನೆಟ್ಟಿಗರು ಏನಂದ್ರು ಗೊತ್ತಾ

ಮುಂದಿನ ಸುದ್ದಿ
Show comments