Webdunia - Bharat's app for daily news and videos

Install App

ಪುಟ್ಟಕ್ಕನ ಮಕ್ಕಳು ಟೀಂ ಕಿತ್ತು ಹಾಕಿಲ್ಲ: ಸೀರಿಯಲ್ ಬಿಡಲು ಕಾರಣ ತಿಳಿಸಿದ ಸಂಜನಾ ಬುರ್ಲಿ

Sampriya
ಭಾನುವಾರ, 27 ಅಕ್ಟೋಬರ್ 2024 (16:33 IST)
Photo Courtesy X
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಟಾಪ್ ಸೀರಿಯಲ್‌ಗಳಲ್ಲಿ ಒಂದಾಗಿರುವ ಪುಟ್ಟಕ್ಕನ ಮಕ್ಕಳು ಧಾರಾವಾಹಿಯ ನಾಯಕಿ ಸ್ನೇಹಾ ಸೀರಿಯಲ್‌ನಲ್ಲಿ ಹೊರಬಂದಿರುವುದಾಗಿ ಹೇಳಿಕೊಂಡಿದ್ದಾರೆ. ಇದೀಗ ಧಾರಾವಾಹಿಯಿಂದ ಹೊರ ಬಂದ ಬಗ್ಗೆ ಸಂಜನಾ ಅವರು ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಸಂಜನಾ ಅವರನ್ನು ಪುಟ್ಟಕ್ಕನ ಸೀರಿಯಲ್‌ನಿಂದ ಕಿತ್ತು ಬಿಸಾಕಲಾಗಿದೆ ಎಂದು ಸುದ್ದಿ ಹಬ್ಬಿತ್ತು. ಇದೀಗ ಇದಕ್ಕೆಲ್ಲ ಅವರು ಉತ್ತರ ನೀಡಿದ್ದಾರೆ.

ಪೋಸ್ಟ್‌ನಲ್ಲಿ ಹೀಗಿದೆ:  ನಮಸ್ತೆ ಪ್ರಿಯರೇ ಎಲ್ಲಾ ನನ್ನ ಅಭಿಮಾನಿಗಳು ಮತ್ತು ಫಾಲೋವರ್ಸ್‌ಗಳ ಜತೆ ಒಂದು ಸುದ್ದಿಯನ್ನು ಹಂಚಿಕೊಳ್ಳಲು ಬಯಸುತ್ತೇನೆ. ಪುಟ್ಟಕ್ಕನ ಮಕ್ಕಳು ಧಾರಾವಾಹಿಯಲ್ಲಿ ಸ್ನೇಹಾ ಪಾತ್ರದ ಜತೆ ನನ್ನ ಪ್ರಯಾಣ ಕೂಡ ಎಂಡ್‌ ಆಗಿದೆ ಎಂದು ಹೇಳಿಕೊಂಡಿದ್ದಾರೆ.

ಮುಂದುವರಿದು, ಕಳೆದ 3 ವರ್ಷಗಳಿಂದ ಸ್ನೇಹಾ ಪಾತ್ರವನ್ನು ನಿರ್ವಹಿಸುವುದು ಕಳೆದ ಮೂರು ವರ್ಷಗಳಿಂದಲೂ ನನ್ನ ವೃತ್ತಿ ಜೀವನದ ಭಾಗವಾಗಿತ್ತು. ನಾನು ಯಾವಾಗಲೂ ಕೃತಜ್ಞರಾಗಿರುತ್ತೇನೆ. ನನಗೆ ಈ ಉತ್ತಮ ಪಾತ್ರವನ್ನು ನೀಡಿದ್ದಕ್ಕಾಗಿ ಮತ್ತು ನನ್ನನ್ನು ಸ್ನೇಹಾ ಆಗಿ ಆಯ್ಕೆ ಮಾಡಿದ್ದಕ್ಕಾಗಿ ಜೀ ವಾಹಿನಿ ಮತ್ತು ಪ್ರೊಡಕ್ಷನ್ ಹೌಸ್‌ಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು.

ಕೆಲವು ವೈಯಕ್ತಿಕ ಕಾರಣಿಗಳಿಗಾಗಿ ಹಾಗೂ ಬಂದು ನಿಂತಿರುವ ಕೆಲವು ಸವಾಲುಗಳನ್ನು ಎದುರಿಸಲು ನಾನು ಈ ಧಾರಾವಾಹಿಂದ ಹೊರಗೆ ಬರಲೇ ಬೇಕಾಯಿತು. ಈ ಪ್ರಾಜೆಕ್ಟ್‌ನಿಂದ ನಾನು ಪಡೆದ ಅಪಾರ ಪ್ರೀತಿ ಮತ್ತು ಮನ್ನಣೆಯು ನನಗೆ ಸಿಕ್ಕ ದೊಡ್ಡ ಪ್ರಶಸ್ತಿ. ಅದು ನನ್ನೊಂದಿಗೆ ಶಾಶ್ವತವಾಗಿ ಉಳಿಯುತ್ತದೆ. ಹೆಚ್ಚಿನವರು ಪಾತ್ರವು ಸಾಯುವ ದೃಶ್ಯ ನೋಡಿ ದುಃಖಿತರಾಗಿದ್ದೀರಿ ಎಂದು ನನಗೆ ತಿಳಿದಿದೆ. ಆದರೆ ಇದನ್ನು ಧನಾತ್ಮಕವಾಗಿ ತೆಗೆದುಕೊಳ್ಳೋಣ. ಮುಂದಿನ ದಿನಗಳಲ್ಲಿ ಅಭಿಮಾನಿಗಳನ್ನು ಭಿನ್ನ ಪಾತ್ರದ ಮೂಲಕ ಭೇಟಿ ಆಗುವ ವಿಶ್ವಾಸ ನನಗೆ ಇದೆ.

ಸ್ವಲ್ಪ ದಿನಗಳ ನಂತರ ಮತ್ತೇ ವಿಭಿನ್ನ ಪಾತ್ರದ ಮೂಲಕ ನಿಮ್ಮ ಮುಂದೆ ಬರುತ್ತೇನೆ. ಕಳೆದ 3 ವರ್ಷಗಳಲ್ಲಿ ಕರ್ನಾಟಕ ನನಗೆ ನೀಡಿದ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ನನಗೆ ಮುಂದಿನ ದಿನಗಳಲ್ಲೂ ಇದೇ ಪ್ರೀತಿ, ಗೌರವ ಸಿಗುವ ವಿಶ್ವಾಸವಿದೆ ಎಂದು ಬರೆದುಕೊಂಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kantara Chapter 1: ರಿಷಭ್ ಶೆಟ್ಟಿ ಜನ್ಮದಿನಕ್ಕೆ ಕಾಂತಾರ ಚಾಪ್ಟರ್ 1 ಬಿಗ್ ಅಪ್ ಡೇಟ್

ಅಕ್ರಮ ಚಿನ್ನ ಸಾಗಣೆ ಪ್ರಕರಣ: ಬೆಚ್ಚಿಬೀಳಿಸುತ್ತೆ ರನ್ಯಾ ರಾವ್‌ ಮಾಸ್ಟರ್ ಮೈಂಡ್‌

ಎಕ್ಕ ಬಿಡುಗಡೆಗೆ ದಿನಗಣನೆ ಮಾಡುತ್ತಿರುವಾಗಲೇ ಮಂತ್ರಾಲಯಕ್ಕೆ ಯುವ ರಾಜ್‌ಕುಮಾರ್ ಭೇಟಿ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಮುಂದಿನ ಸುದ್ದಿ
Show comments