Webdunia - Bharat's app for daily news and videos

Install App

ಎರಡು ತಿಂಗಳ ಬಳಿಕ ದರ್ಶನ್ ನೋಡಲು ಜೈಲಿಗೆ ಬಂದ ರಚಿತಾ ರಾಮ್

Krishnaveni K
ಗುರುವಾರ, 22 ಆಗಸ್ಟ್ 2024 (15:04 IST)
Photo Credit: Facebook
ಬೆಂಗಳೂರು: ತಮ್ಮನ್ನು ಚಿತ್ರರಂಗಕ್ಕೆ ಪರಿಚಯಿಸಿದ ನಟ ದರ್ಶನ್ ಈಗ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ. ಇದೀಗ ದರ್ಶನ್ ಬಂಧನವಾಗಿ ಎರಡು ತಿಂಗಳ ಬಳಿಕ ನಟಿ ರಚಿತಾ ರಾಮ್ ಜೈಲಿಗೆ ಬಂದಿದ್ದಾರೆ.

ರಚಿತಾ ರಾಮ್ ಇಂದು ಪರಪ್ಪನ ಅಗ್ರಹಾರ ಜೈಲಿಗೆ ಬಂದು ದರ್ಶನ್ ರನ್ನು ಭೇಟಿ ಮಾಡಿದ್ದಾರೆ. ರಚಿತಾ ಜೊತೆಗೆ ಬಿಜೆಪಿ ಮುಖಂಡ ಇಂಡವಾಳು ಸಚ್ಚಿದಾನಂದ್ ಕೂಡಾ ಇದ್ದರು. ಇಬ್ಬರೂ ಇಂದು ಪರಪ್ಪನ ಅಗ್ರಹಾರ ಜೈಲಿನ ಹೊರಾವರಣದಲ್ಲಿ ಕಾಣಿಸಿಕೊಂಡಿದ್ದಾರೆ.

ದರ್ಶನ್ ಜೈಲು ಸೇರಿದ ಬಳಿಕ ಇದುವರೆಗೆ ಅವರ ಅನೇಕ ಆಪ್ತರು ಬಂದು ಭೇಟಿ ಮಾಡಿಕೊಂಡು ಹೋಗಿದ್ದಾರೆ. ವಾರದಲ್ಲಿ ಇಬ್ಬರಿಗೆ ಮಾತ್ರ ದರ್ಶನ್ ಭೇಟಿಗೆ ಅವಕಾಶವಿದೆ. ಮೊನ್ನೆಯಷ್ಟೇ ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ರನ್ನು ಭೇಟಿ ಮಾಡಿಕೊಂಡು ಹೋಗಿದ್ದರು.

ಕಳೆದ ವಾರ ಒಂದು ದಿನ ವಿಜಯಲಕ್ಷ್ಮಿ ಬಂದಿದ್ದರೆ ಮತ್ತೊಂದು ದಿನ ಅಭಿಷೇಕ್ ಅಂಬರೀಶ್, ಚಿಕ್ಕಣ್ಣ ಮುಂತಾದವರು ಬಂದು ದರ್ಶನ್ ಭೇಟಿ ಮಾಡಿಕೊಂಡು ಹೋಗಿದ್ದರು. ಇಂದು ರಚಿತಾ ರಾಮ್ ಜೈಲಿಗೆ ಬಂದಿದ್ದಾರೆ. ದರ್ಶನ್ ಕುಟುಂಬದವರಿಗೆ ಭೇಟಿಗೆ ಅವಕಾಶ ನೋಡಿಕೊಂಡು ಇತರರಿಗೆ ಅವಕಾಶ ನೀಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments