Webdunia - Bharat's app for daily news and videos

Install App

ದರ್ಶನ್ ನೋಡಿ ಕಣ್ಣೀರು ಹಾಕಿದ್ದ ರಚಿತಾ ರಾಮ್ ಬಳಿಕ ನೇರವಾಗಿ ತೆರಳಿದ್ದು ಇಲ್ಲಿಗೆ

Krishnaveni K
ಶುಕ್ರವಾರ, 23 ಆಗಸ್ಟ್ 2024 (08:50 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ರನ್ನು ನೋಡಲು ಜೈಲಿಗೆ ಬಂದಿದ್ದ ನಟಿ ರಚಿತಾ ರಾಮ್ ಬಳಿಕ ನೇರವಾಗಿ ಅಲ್ಲಿಂದ ಈ ವಿಶೇಷ ಸ್ಥಳಕ್ಕೆ ತೆರಳಿದ್ದಾರೆ.

ನಟ ದರ್ಶನ್ ರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಭೇಟಿಯಾದ ಬಳಿಕ ರಚಿತಾ ರಾಮ್ ಭಾವುಕರಾಗಿದ್ದರು. ರಾಜ ರಾಜನಂತೆ ಇದ್ದರೇ ಚೆನ್ನ. ದರ್ಶನ್ ಸರ್ ನ್ನು ಈ ರೀತಿ ನೋಡಲು ಸಾಧ್ಯವಾಗುತ್ತಿಲ್ಲ. ಅವರ ಋಣ ನಮ್ಮಿಡೀ ಕುಟುಂಬಕ್ಕಿದೆ. ಬಿಂದ್ಯಾ ಆಗಿದ್ದ ನಾನು ರಚಿತಾ ರಾಮ್ ಆಗಲು ದರ್ಶನ್ ಸರ್ ಅವರೇ ಕಾರಣ ಎಂದು ರಚಿತಾ ಕಣ್ಣೀರು ಹಾಕಿದ್ದರು.

ದರ್ಶನ್ ರನ್ನು ಜೈಲಿನಲ್ಲಿ ಭೇಟಿಯಾದ ಬಳಿಕ ರಚಿತಾ ರಾಮ್ ನೇರವಾಗಿ ಮಂತ್ರಾಲಯಕ್ಕೆ ತೆರಳಿದ್ದಾರೆ. ಮಂತ್ರಾಲಯದಲ್ಲಿ ಈಗ ಗುರು ರಾಘವೇಂದ್ರರ ಆರಾಧನಾ ಮಹೋತ್ಸವ ನಡೆಯುತ್ತಿದೆ. ರಾಯರ ದರ್ಶನ ಪಡೆದ ರಚಿತಾ ಪಾದುಕೆಗೆ ಆರತಿ ಮಾಡಿ ಭಕ್ತಿಯಿಂದ ಪ್ರಾರ್ಥನೆ ಮಾಡಿದ್ದಾರೆ.

ರಚಿತಾ ಈ ಹಿಂದೆಯೂ ಅನೇಕ ಬಾರಿ ಮಂತ್ರಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ರಾಯರ ದರ್ಶನಕ್ಕೆ ಆಗಾಗ ಬರುವ ರಚಿತಾ ಈಗ ಆರಾಧನಾ ಮಹೋತ್ಸವದ ಸಂದರ್ಭದಲ್ಲಿ ಭೇಟಿ ಕೊಟ್ಟಿದ್ದಾರೆ. ಈಗಾಗಲೇ ಅನೇಕ ವಿಐಪಿಗಳೂ ರಾಯರ ಮಹೋತ್ಸವದಲ್ಲಿ ಪಾಲ್ಗೊಂಡು ಆಶೀರ್ವಾದ ಪಡೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments