Webdunia - Bharat's app for daily news and videos

Install App

ವಂಚಕ ಯುವರಾಜ್ ಜೊತೆಗೆ ರಾಧಿಕಾ ಕುಮಾರಸ್ವಾಮಿ ಹಣಕಾಸಿನ ವ್ಯವಹಾರ

Webdunia
ಬುಧವಾರ, 6 ಜನವರಿ 2021 (17:25 IST)
ಬೆಂಗಳೂರು: ಪ್ರಭಾವಿಗಳೊಂದಿಗೆ ಗುರುತಿಸಿಕೊಂಡು ಗಣ್ಯರಿಗೆ ವಂಚಿಸುತ್ತಿದ್ದ ಯುವರಾಜ್ ಎಂಬಾತ ಕೆಲವು ದಿನಗಳ ಹಿಂದೆ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ. ಈತ ಮತ್ತು ನಟಿ ರಾಧಿಕಾ ಕುಮಾರಸ್ವಾಮಿ ಜೊತೆಗಿನ ಹಣಕಾಸಿನ ವ್ಯವಹಾರ ಈಗ ಬಯಲಾಗಿದೆ. ಈ ಸಂಬಂಧ ನಟಿ ರಾಧಿಕಾ ಸ್ಪಷ್ಟನೆಯನ್ನೂ ಕೊಟ್ಟಿದ್ದಾರೆ.


ಯುವರಾಜ್ ನಿಂದ ರಾಧಿಕಾ ಖಾತೆಗೆ ಒಂದೂವರೆ ಕೋಟಿ ರೂ. ವರ್ಗಾವಣೆಯಾಗಿದೆ ಎಂಬ ಮಾತು ಕೇಳಿಬಂದಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ರಾಧಿಕಾ ಯುವರಾಜ್ ನನ್ನ ಖಾತೆಗೆ ಹಣ ವರ್ಗಾಯಿಸಿರುವುದು ನಿಜ. ಆದರೆ ಒಂದೂವರೆ ಕೋಟಿಯಲ್ಲ, 15 ಲಕ್ಷ ರೂ. ಅದೂ ಸಿನಿಮಾವೊಂದರ ನಿಮಿತ್ತ. ಯುವರಾಜ್ ಪತ್ನಿ ನಿರ್ಮಾಪಕಿ. ಸಿನಿಮಾ ಮಾಡುವ ಸಂಬಂಧ ನನಗೆ ಹಣ ನೀಡಿದ್ದರು. ಇನ್ನೊಬ್ಬ ವ್ಯಕ್ತಿಯ ಖಾತೆಯಿಂದ 60 ಲಕ್ಷ ರೂ. ವರ್ಗಾಯಿಸಿದ್ದರು. ನನಗೆ ಅವರು ಮೊದಲಿನಿಂದಲೂ ಪರಿಚಯವಿತ್ತು. ಹಾಗಾಗಿ ಸಿನಿಮಾ ವಿಚಾರವಾಗಿ ಎಂದು ಸುಮ್ಮನಿದ್ದೆ. ಇದೀಗ ಅವರ ಹಣವನ್ನೆಲ್ಲಾ ಅವರಿಗೇ ವಾಪಸ್ ಮಾಡ್ತೀನಿ. ನನ್ನ ತಂದೆಯ ಕಾಲದಿಂದಲೂ ಅವರ ಪರಿಚಯವಿತ್ತು. ಹೀಗಾಗಿ ಅವರನ್ನು ತುಂಬಾ ನಂಬಿದ್ದೆ. ಈಗ ನನಗೆ ಮೋಸವಾಗಿದೆ’ ಎಂದು ರಾಧಿಕಾ ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments