Webdunia - Bharat's app for daily news and videos

Install App

ಧರ್ಮಸ್ಥಳದಲ್ಲಿ ರಾಧಿಕಾ ಪಂಡಿತ್ ಭಾವುಕರಾಗಿದ್ದು ಯಾಕೆ?

Webdunia
ಶನಿವಾರ, 13 ಮೇ 2017 (11:06 IST)
ಮಂಗಳೂರು: ಸ್ಯಾಂಡಲ್ ವುಡ್ ನ ಮೋಸ್ಟ್ ಫೇವರಿಟ್ ಜೋಡಿ ಯಶ್-ರಾಧಿಕಾ ಪಂಡಿತ್ ಜೋಡಿ ತಮ್ಮ ವೈವಾಹಿಕ ಜೀವನದ ಐದು ತಿಂಗಳು ಪೂರೈಸಿದ ಹಿನ್ನಲೆಯಲ್ಲಿ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದರು.

 
ಈ ವೇಳೆ ದಂಪತಿ ದೇವರ ದರ್ಶನ ಮಾಡಿದುದಲ್ಲದೆ, ಇಲ್ಲಿ ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲೂ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಧಿಕಾ ‘ಇದು ಯಶ್ ಫೇವರಿಟ್ ಜಾಗ. ಇಲ್ಲಿಗೆ ಬರುವುದೆಂದರೆ ನಮಗೆ ಪುಣ್ಯ ಭಾವ ಬರುತ್ತದೆ. ಮದುವೆಯಾದ ನಂತರ ಎರಡನೇ ಬಾರಿ ಬರುತ್ತಿದ್ದೇನೆ.

ನನ್ನ ಕಡ್ಡಿಪುಡಿ ಚಿತ್ರದ ಮದುವೆ ಸೀನ್ ಕೂಡಾ ಇಲ್ಲೇ ಶೂಟಿಂಗ್ ಆಗಿತ್ತು. ನಮಗಿಬ್ಬರಿಗೂ ಇದು ವಿಶೇಷವಾದ ಸ್ಥಳ’ ಎಂದರು. ಇದರ ನಡುವೆ ವಿಶಿಷ್ಟ ಸಂಗತಿಯೊಂದನ್ನು ಹೇಳಿಕೊಂಡು ಭಾವುಕರಾದರು.

ಇಲ್ಲಿನ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ವಿಶೇಷವಾಗಿದೆ. ಯಾಕೆಂದರೆ ಈ ಕಾರ್ಯಕ್ರಮದಲ್ಲಿ ವರನಟ ರಾಜ್ ಕುಮಾರ್ ದಂಪತಿ ಬಿಟ್ಟರೆ ಸಿನಿಮಾ ತಾರಾ ಜೋಡಿಯೊಂದು ಭಾಗವಹಿಸುತ್ತಿರುವುದು ಯಶ್ ಮತ್ತು ರಾಧಿಕಾ ಅಂತೆ. ಈ ವಿಷಯವನ್ನು ಸ್ವತಃ ರಾಧಿಕಾ ಭಾವುಕರಾಗಿ ಹೇಳಿಕೊಂಡರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments