Webdunia - Bharat's app for daily news and videos

Install App

ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಯಶ್-ರಾಧಿಕಾ ಪಂಡಿತ್!

Webdunia
ಶುಕ್ರವಾರ, 21 ಜುಲೈ 2017 (11:34 IST)
ಬೆಂಗಳೂರು: ಮದುವೆಯಾದ ಮೇಲೆ ಕನ್ನಡದ ನಟಿಯರು ಮೊದಲಿನ ಹಾಗೇ ನಾಯಕಿಯಾಗಿ ಮಿಂಚಿದ ಉದಾಹರಣೆ ಕಡಿಮೆ. ಆದರೆ ರಾಕಿಂಗ್ ಸ್ಟಾರ್ ಯಶ್ ಕೈ ಹಿಡಿದ ರಾಧಿಕಾ ಪಂಡಿತ್ ಇದೀಗ ಅಭಿಮಾನಿಗಳಿಗೆ ಶುಭ ಸುದ್ದಿ ಕೊಡುತ್ತಿದ್ದಾರೆ.


ಶುಭ ಸುದ್ದಿ ಎಂದಾಕ್ಷಣ ಏನೇನೋ ಯೋಚನೆಗಳು ಬೇಡ. ರಾಧಿಕಾ ಮತ್ತೆ ಬಣ್ಣದ ಲೋಕಕ್ಕೆ ಮರಳಲು ನಿರ್ಧರಿಸಿದ್ದಾರೆ. ಅದಕ್ಕಿಂತ ದೊಡ್ಡ ಖುಷಿ ಅಭಿಮಾನಿಗಳಿಗೆ ಇನ್ನೊಂದು ಇದೆಯಾ?

ರಾಧಿಕಾರಂತಹ ಪ್ರತಿಭಾವಂತ ನಟಿ ಮತ್ತೆ ನಟನೆಗೆ ಮರಳಲಿದ್ದಾರೆ. ಮದುವೆಗೆ ಮೊದಲು ನಟಿಸಿದ್ದ ಸಂತು ಸ್ಟ್ರೇಟ್ ಫಾರ್ವರ್ಡ್ ಚಿತ್ರ ಅವರ ಕೊನೆಯ ಚಿತ್ರವಾಗಿತ್ತು. ನಂತರ ಫ್ಯಾಮಿಲಿ ಲೈಫ್ ನಲ್ಲಿ ಬ್ಯುಸಿಯಾಗಿದ್ದ ರಾಧಿಕಾ ಇದೀಗ ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಚಿತ್ರವೊಂದರಲ್ಲಿ ನಾಯಕಿಯಾಗಿ ನಟಿಸಲಿದ್ದಾರೆ ಎಂಬ ಸುದ್ದಿ ಬಂದಿದೆ. ರಂಗಿತರಂಗ ಖ್ಯಾತಿಯ ನಿರೂಪ್ ಬಂಡಾರಿ ರಾಧಿಕಾಗೆ ನಾಯಕರಾಗಲಿದ್ದಾರೆ. ಹೆಚ್ಚಿನ ವಿವರಗಳು ಸದ್ಯದಲ್ಲೇ ಹೊರ ಬೀಳಲಿದೆ.

ಮದುವೆಯಾದ ಮೇಲೆ ನಟಿಯರು ಮೂಲೆ ಸೇರುತ್ತಾರೆಂಬ ಎಲ್ಲಾ ಕಟ್ಟಪಾಡುಗಳನ್ನು ಮುರಿಯಲು ಬಯಸುತ್ತೆನೆ ಎಂದು ರಾಧಿಕಾ ಆಂಗ್ಲ ಪತ್ರಿಕೆಯೊಂದರ ಸಂದರ್ಶನದಲ್ಲಿ ಹೇಳಿದ್ದಾರೆ. ಇನ್ನೊಂದೆಡೆ ಪತಿ ರಾಕಿಂಗ್ ಸ್ಟಾರ್ ಯಶ್ ಕೂಡಾ ಇದನ್ನು ರಾಧಿಕಾ ಕಮ್ ಬ್ಯಾಕ್ ಎಂದು ಬರೆಯಬೇಡಿ. ಆಕೆ ಮದುವೆ ನಂತರ ಆರು ತಿಂಗಳು ಬ್ರೇಕ್ ತೆಗೆದುಕೊಂಡು ಮರಳುತ್ತಿದ್ದಾಳಷ್ಟೆ ಎಂದಿದ್ದಾರೆ.

ಇದನ್ನೂ ಓದಿ..  ಭಾರತ-ಚೀನಾ ವಿವಾದಕ್ಕೆ ತುಪ್ಪ ಸುರಿಯಲು ಯತ್ನಿಸುತ್ತಿರುವ ಪಾಕ್

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments