Webdunia - Bharat's app for daily news and videos

Install App

ಈ ಕಾರಣಕ್ಕೆ ನಟ ಅಕ್ಷಯ್ ಕುಮಾರ್ ಗೆ ಧನ್ಯವಾದ ತಿಳಿಸಿದ ರಾಘವ ಲಾರೆನ್ಸ್

Webdunia
ಸೋಮವಾರ, 12 ಅಕ್ಟೋಬರ್ 2020 (12:48 IST)
ಚೆನ್ನೈ : ಕಾಂಚನ ದಂತಹ ಸೂಪರ್ ಹಿಟ್ ಹಾರರ್ ಸಿನಿಮಾವನ್ನು ನಿರ್ದೇಶಿಸಿದ ಖ್ಯಾತ ನಟ , ನಿರ್ದೇಶಕ ರಾಘವ ಲಾರೆನ್ಸ್ ಅವರು ಬಾಲಿವುಡ್ ಗೆ ಪಾದಾರ್ಪಣೆ ಮಾಡಿದ್ದು, ಅದಕ್ಕಾಗಿ ತಮಗೆ ಬೆಂಬಲ ನೀಡಿದ್ದ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

ಹೌದು. ರಾಘವ ಲಾರೆನ್ಸ್ ಅವರು ಕೊನೆಯ ಬಾರಿ ಕಾಂಚನ 3 ಸಿನಿಮಾವನ್ನು ನಿರ್ದೇಶಿಸಿದ್ದರು. ಹಾಗೇ ಅವರ ಕಾಂಚನ (2011) ಸಿನಿಮಾ ಹಿಂದಿಗೆ ರಿಮೇಕ್ ಆಗುತ್ತಿದ್ದು, ಇದಕ್ಕೆ ಲಕ್ಷ್ಮೀ ಬಾಂಬ್ ಎಂದು ಟೈಟಲ್ ಇಡಲಾಗಿದೆ. ಇದರಲ್ಲಿ ಅಕ್ಷಯ್ ಕುಮಾರ್ ನಟಿಸಲಿದ್ದಾರೆ. ಇದೀಗ ಈ ಚಿತ್ರದ ಮೂಲಕ ರಾಘವ ಲಾರೆನ್ಸ್ ಅವರು ಬಾಲಿವುಡ್ ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈಗಾಗಲೇ ಈ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಉತ್ತಮ ಪ್ರತಿಕ್ರಿಯೆ ಕೂಡ ಸಿಕ್ಕಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ರಾಘವ ಲಾರೆನ್ಸ್ ಅವರು, ಲಕ್ಷ್ಮೀ ಬಾಂಬ್ ಸಿನಿಮಾ ಟ್ರೇಲರ್ ಗೆ ನೀವು ತೋರಿದ ನಿಮ್ಮ ಪ್ರೀತಿ , ಬೆಂಬಲ ನನಗೆ ತುಂಬಾ ಸಂತೋಷ ನೀಡಿದೆ. ಅಕ್ಷಯ್ ಕುಮಾರ್ ಸರ್ ಗೆ ನನ್ನ ವಿಶೇಷ ಧನ್ಯವಾದ, ಚಿತ್ರದ ಯಶಸ್ಸಿಗೆ ನಿಮ್ಮೆಲ್ಲರ ಆಶೀರ್ವಾದ ನನಗೆ ಬೇಕು ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments