Publish Date: Sat, 27 Feb 2021 (09:21 IST)
Updated Date: Sat, 27 Feb 2021 (09:23 IST)
ಬೆಂಗಳೂರು: ಡ್ರಗ್ ಕೇಸ್ ನಲ್ಲಿ ಜಾಮೀನು ಪಡೆದು ಹೊರಬಂದ ನಟಿ ರಾಗಿಣಿ ದ್ವಿವೇದಿ ಇದೇ ಮೊದಲ ಬಾರಿಗೆ ಪತ್ರಕರ್ತರ ಮುಂದೆ ಕಾಣಿಸಿಕೊಂಡಿದ್ದಾರೆ.
ವಿಶೇಷ ಚೇತನ ಕ್ರಿಕೆಟ್ ಪಟುಗಳು ಆಯೋಜಿಸಿರುವ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಟೂರ್ನಿಗೆ ವಿಶೇಷ ರಾಯಭಾರಿಯಾಗಿರುವ ರಾಗಿಣಿ ತಮ್ಮ ತಂಡದ ಜೊತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ವಿಶೇಷ ಚೇತನರ ಕ್ರಿಕೆಟ್ ಗೆ ಶುಭ ಹಾರೈಸಿರುವ ರಾಗಿಣಿ, ಡ್ರಗ್ ಕೇಸ್ ಬಗ್ಗೆ ಮಾತನಾಡಲು ನಿರಾಕರಿಸಿದ್ದಾರೆ. ಇನ್ನು, ಈ ವರ್ಷ ಹೊಸ ಸಿನಿಮಾ ಒಪ್ಪಿಕೊಂಡಿರುವ ರಾಗಿಣಿ, ಮತ್ತಷ್ಟು ಸಮಾಜಮುಖೀ ಕೆಲಸ ಮಾಡುವುದಾಗಿ ಹೇಳಿಕೊಂಡಿದ್ದಾರೆ.