Webdunia - Bharat's app for daily news and videos

Install App

ಹೊಸ ಕತೆಯೊಂದಿಗೆ ಕನ್ನಡಕ್ಕೆ ರೀ ಎಂಟ್ರಿ ಕೊಡುತ್ತಿದ್ದಾರೆ ರಾಜ್ ಬಿ ಶೆಟ್ಟಿ

Krishnaveni K
ಶುಕ್ರವಾರ, 21 ಜೂನ್ 2024 (11:44 IST)
ಬೆಂಗಳೂರು: ಮಲಯಾಳಂನಲ್ಲಿ ಟರ್ಬೋ ಸಿನಿಮಾ ಬಳಿಕ ರಾಜ್ ಬಿ ಶೆಟ್ಟಿ ಪರಭಾಷೆಯಲ್ಲೇ ಸೆಟ್ಲ್ ಆಗುತ್ತಾರೇನೋ ಎಂದು ಕನ್ನಡಿಗರು ಅಂದುಕೊಂಡಿದ್ದರು. ಆದರೆ ಈಗ ರಾಜ್ ಬಿ ಶೆಟ್ಟಿ ಹೊಸ ಕತೆಯೊಂದಕ್ಕೆ ಕನ್ನಡಕ್ಕೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ.

ರಾಜ್ ಬಿ ಶೆಟ್ಟಿ ನಾಯಕರಾಗಿ ಕನ್ನಡದಲ್ಲಿ ಬಿಡುಗಡೆಯಾದ ಕೊನೆಯ ಸಿನಿಮಾವೆಂದರೆ ಸ್ವಾತಿ ಮುತ್ತಿನ ಮಳೆ ಹನಿಯೆ. ಇದು ಒಟಿಟಿಯಲ್ಲಿ ಬಿಡುಗಡೆಯಾಗಿತ್ತು. ಆದರೆ ಇದು ರಾಜ್ ಬಿ ಶೆಟ್ಟಿಗೆ ಅಷ್ಟೊಂದು ಯಶಸ್ಸು ಕೊಡಲಿಲ್ಲ. ಇದಕ್ಕೆ ಮೊದಲು ಬಿಡುಗಡೆಯಾಗಿದ್ದ ಟೋಬಿ ಸಿನಿಮಾವೂ ನಿರೀಕ್ಷಿಸಿದಷ್ಟು ಯಶಸ್ಸು ಕೊಡಲಿಲ್ಲ.

ಈ ಹಿನ್ನಲೆಯಲ್ಲಿ ರಾಜ್ ಬಿ ಶೆಟ್ಟಿ ಮಲಯಾಳಂನಲ್ಲಿ ಸೂಪರ್ ಸ್ಟಾರ್ ಮಮ್ಮುಟ್ಟಿ ಜೊತೆಗಿನ ಟರ್ಬೊ ಸಿನಿಮಾದಲ್ಲಿ ಅವಕಾಶ ಪಡೆದಿದ್ದರು. ಈ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ಖಡಕ್ ವಿಲನ್ ಪಾತ್ರ ಮಾಡಿದ್ದರು. ಈ ಪಾತ್ರಕ್ಕೆ ಮಲಯಾಳಿ ಪ್ರೇಕ್ಷಕರಿಂದ ಅವರಿಗೆ ಮೆಚ್ಚುಗೆಯೂ ಸಿಕ್ತು. ಹೀಗಾಗಿ ಮುಂದೆ ರಾಜ್ ಬಿ ಶೆಟ್ಟಿ ಪರಭಾಷೆಗಳತ್ತ ಹಾರಬಹುದು ಎಂದು ಎಲ್ಲರೂ ಲೆಕ್ಕಾಚಾರ ಹಾಕಿದ್ದರು.

ಈ ನಡುವೆ ರಾಜ್ ಬಿ ಶೆಟ್ಟಿ ತಮ್ಮ ಲಾಫಿಂಗ್ ಬುದ್ಧ ಕ್ರಿಯೇಷನ್ ನಡಿ ಹೊಸ ಸಿನಿಮಾದಲ್ಲಿ ನಟಿಸಲು ನಟರು ಬೇಕಾಗಿದ್ದಾರೆ ಎಂದು ಜಾಹೀರಾತು ನೀಡಿದ್ದರು. ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಸದ್ಯದಲ್ಲೇ ಹೊಸ ಕತೆಯೊಂದಿಗೆ ನಿಮ್ಮ ಮುಂದೆ ಬರಲಿದ್ದೇನೆ ಎಂದಿದ್ದಾರೆ. ಇದು ಕನ್ನಡದಲ್ಲಿ ನಿರ್ಮಾಣವಾಗಲಿರುವ ಸಿನಿಮಾ. ಹೀಗಾಗಿ ರಾಜ್ ಬಿ ಶೆಟ್ಟಿ ಪಕ್ಕದ ಕೇರಳಕ್ಕೆ ಹೋಗಿ ಮತ್ತೆ ಕನ್ನಡಕ್ಕೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ಅಭಿಮಾನಿಗಳೂ ಇದಕ್ಕೆ ಪ್ರತಿಕ್ರಿಯಿಸಿದ್ದು ಗರುಡ ಗಮನ ವೃಷಭ ವಾಹನ ಭಾಗ 2 ಮಾಡಿ ಎಂದು ಸಲಹೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments