ರಾಜೇಶ್ ಅಂತಿಮ ದರ್ಶನಕ್ಕೆ ಅವಕಾಶ : ಅರ್ಜುನ್ ಸರ್ಜಾ

Webdunia
ಶನಿವಾರ, 19 ಫೆಬ್ರವರಿ 2022 (13:13 IST)
ಬೆಂಗಳೂರು : ಹಿರಿಯ ರಾಜೇಶ್ ಇಂದು (ಶನಿವಾರ, ಫೆ.19) ಮುಂಜಾನೆ ನಿಧನರಾಗಿದ್ದಾರೆ.
 
ಅವರ ಕುರಿತು ಹಾಗೂ ಅಂತ್ಯಕ್ರಿಯೆಯ ಕುರಿತು ರಾಜೇಶ್ ಅಳಿಯ, ನಟ ಅರ್ಜುನ್ ಸರ್ಜಾ ಮಾಹಿತಿ ನೀಡಿದ್ದಾರೆ. ಈ ದಿನ ದುಃಖಕರವಾದ ದಿನ ಎಂದಿರುವ ಅರ್ಜುನ್ ಸರ್ಜಾ, ‘‘ಕನ್ನಡ ಚಿತ್ರರಂಗದಲ್ಲಿ 50 ವರ್ಷಕ್ಕೂ ಹೆಚ್ಚು ಇದ್ದವರು ರಾಜೇಶ್. ಡಾ.ರಾಜ್ಕುಮಾರ್ರವರ ಪಂಕ್ತಿಯವರು.

ಮನಸ್ಸಿಗೆ ಕಷ್ಟವಾಗುತ್ತಿದೆ’’ ಎಂದು ಹೇಳಿದ್ದಾರೆ. ರಾಜೇಶ್ ಅವರ ಕೊನೆಯ ದಿನಗಳ ಕುರಿತು ಮಾಹಿತಿ ನೀಡಿದ ಅರ್ಜುನ್ ಸರ್ಜಾ, ‘‘10 ದಿನಗಳಿಂದ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದರು. ಮೊದಲಿಗೆ ಪ್ರೋ ಕೋವಿಡ್ ಆಮೇಲೆ ಸಿಕೆಡಿ ಸಮಸ್ಯೆ ಆಗಿತ್ತು.

ವಿದ್ಯಾರಣ್ಯಪುರ ಸ್ವನಿವಾಸದಲ್ಲಿ ಪೂಜೆ ನಡೆಯಲಿದೆ. 11 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ಏರ್ಪಾಟು ಮಾಡಲಾಗಿದೆ. ಮಧ್ಯಾಹ್ನ 3.30ಕ್ಕೆ ಮೇಡಿ ಅಗ್ರಹಾರ ಲಕ್ಷ್ಮೀಪುರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಸಾರ್ವಜನಿಕರು ರವೀಂದ್ರ ಕಲಾಕ್ಷೇತ್ರಕ್ಕೆ ಆಗಮಿಸಿ ದರ್ಶನ ಪಡೆಯಬಹುದು ಎಂದು ಅರ್ಜುನ್ ಸರ್ಜಾ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಉತ್ತುಂಗದಲ್ಲಿರುವಾಗಲೇ ಗಾಯನಕ್ಕೆ ಅರಿಜಿತ್ ಸಿಂಗ್ ಗುಡ್‌ಬೈ, ಅಚ್ಚರಿ ನಡೆಗೆ ಫ್ಯಾನ್ಸ್ ಶಾಕ್

ಯುವತಿ ಜತೆ ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪದ ಬೆನ್ನಲ್ಲೇ ಪಲಾಶ್ ಕಾಣಿಸಿಕೊಂಡಿದ್ದು ಇಲ್ಲಿ

ನಟಿ ಕಾವ್ಯ ಕುಟುಂಬದಲ್ಲಿ ಇದೆಂಥಾ ಕಲಹ, ಸಹೋದರಿ ಠಾಣೆ ಮೆಟ್ಟಿಲೇರಿದ್ದೇಕೆ

ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ರಾಜಕೀಯಕ್ಕೆ ಬನ್ನಿ ಎಂದು ಡಿಕೆ ಶಿವಕುಮಾರ್ ಕರೆದಾಗ ಏನಾಯ್ತು

ರಾಧಾ ರಮಣ ಖ್ಯಾತಿಯ ನಟಿ ಕಾವ್ಯಾ ಗೌಡ, ಪತಿ ಮೇಲೆ ಹಲ್ಲೆ

ಮುಂದಿನ ಸುದ್ದಿ
Show comments