Select Your Language

Notifications

webdunia
webdunia
webdunia
webdunia

ರಜನೀಕಾಂತ್ ಮತ್ತು ಕಮಲ್ ಹಾಸನ್ ರ ಈ ರಹಸ್ಯ ಔಟ್!

ರಜನೀಕಾಂತ್ ಮತ್ತು ಕಮಲ್ ಹಾಸನ್ ರ ಈ ರಹಸ್ಯ ಔಟ್!
ಚೆನ್ನೈ , ಶುಕ್ರವಾರ, 22 ಸೆಪ್ಟಂಬರ್ 2017 (11:05 IST)
ಚೆನ್ನೈ:  ತಮಿಳುನಾಡಿನಲ್ಲಿ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸಬೇಕೆಂದು ಓಡಾಡುತ್ತಿರುವ ಕಮಲ್ ಹಾಸನ್ ಮತ್ತು ರಜನೀಕಾಂತ್ ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರಂತೆ. ಹಾಗಂತ ಸ್ವತಃ ಕಮಲ್ ಹಾಸನ್ ಆಂಗ್ಲ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.


ಮುಂಬರುವ ಚುನಾವಣೆಗೆ ತಮ್ಮ ಪಕ್ಷ ಸಿದ್ಧವಾಗಿರುತ್ತದೆ ಎಂದು ಕಮಲ್ ಹಾಸನ್ ಸಂದರ್ಶನದಲ್ಲಿ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ರಾಜಕೀಯಕ್ಕೆ ಅಧಿಕೃತವಾಗಿ ಬರುವ ಮೊದಲು ಹಲವು ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿರುವ ಕಮಲ್ ಹಾಸನ್ 4-5 ವಾರದ ಹಿಂದೆ ರಜನೀಕಾಂತ್ ರನ್ನು ಭೇಟಿಯಾಗಿ ಚರ್ಚಿಸಿದ್ದೆ ಎಂದಿದ್ದಾರೆ.

‘ನಮ್ಮಿಬ್ಬರದ್ದೂ ಗುರಿ ಒಂದೇ. ಭ್ರಷ್ಟಾಚಾರ ತೊಲಗಿಸಬೇಕೆಂಬುದು. ಆದರೆ ನಮ್ಮ ದಾರಿಗಳು ಬೇರೆ. ಹಾಗಾಗಿ ನಮ್ಮ ನಡುವೆ ಯಾವುದೇ ಒಪ್ಪಂದವಾಗಲಿಲ್ಲ. ಇಬ್ಬರೂ ಪರಸ್ಪರ ಆಲಂಗಿಸಿಕೊಂಡು ನಮ್ಮ ದಾರಿ ನೋಡಿಕೊಳ್ಳುವ ತೀರ್ಮಾನಕ್ಕೆ ಬಂದೆವು’ ಎಂದು ಕಮಲ್ ಬಹಿರಂಗಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸಚಿನ್ ಗಿಂತಲೂ ಕೊಹ್ಲಿಯೇ ಚೆನ್ನ ಎಂದ ಕರೀನಾ ಕಪೂರ್