Select Your Language

Notifications

webdunia
webdunia
webdunia
webdunia

ಆಸ್ಪತ್ರೆಯಿಂದ ಮನೆಗೆ ಬಂದ ರಜನಿಕಾಂತ್‌ ಮೊದಲ ಪೋಸ್ಟ್‌: ನರೇಂದ್ರ ಮೋದಿ, ಅಮಿತಾಬ್‌ಗೆ ಕೃತಜ್ಞತೆ

ಆಸ್ಪತ್ರೆಯಿಂದ ಮನೆಗೆ ಬಂದ ರಜನಿಕಾಂತ್‌ ಮೊದಲ ಪೋಸ್ಟ್‌: ನರೇಂದ್ರ ಮೋದಿ, ಅಮಿತಾಬ್‌ಗೆ ಕೃತಜ್ಞತೆ

Sampriya

ಚೆನ್ನೈ , ಶನಿವಾರ, 5 ಅಕ್ಟೋಬರ್ 2024 (14:26 IST)
ಚೆನ್ನೈ: ನಾನು ಬೇಗ ಗುಣಮುಖರಾಗಲಿ ಎಂದು ಹಾರೈಸಿದ ನನ್ನ ಎಲ್ಲಾ ರಾಜಕೀಯ ಮಿತ್ರರಿಗೆ, ನನ್ನ ಎಲ್ಲಾ ಚಿತ್ರರಂಗದ ಗೆಳೆಯರಿಗೆ, ನನ್ನ ಎಲ್ಲಾ ಹಿತೈಷಿಗಳಿಗೆ, ಪತ್ರಿಕಾ ಮತ್ತು ಮಾಧ್ಯಮದವರಿಗೆ, ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಧನ್ಯವಾದಗಳು ಎಂದು  ಸೂಪರ್‌ಸ್ಟಾರ್‌ ರಜನಿಕಾಂತ್‌ ಕೃತಜ್ಞತೆ ಸಲ್ಲಿಸಿದ್ದಾರೆ.

ನೆಚ್ಚಿನ ನಟ ಬೇಗ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಆಗಲಿ ಎಂದು ಪ್ರಾರ್ಥಿಸಿದ ಅಭಿಮಾನಿಗಳು ಮತ್ತು ಆತ್ಮೀಯರಿಗೆ  ರಜನಿಕಾಂತ್‌ ಧನ್ಯವಾದ ಸಲ್ಲಿಸಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಅವರು, ನನ್ನ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ, ಪ್ರೀತಿಯ ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೀ ಹೃತ್ಪೂರ್ವಕ ಧನ್ಯವಾದಗಳು. ಅಮಿತಾಬ್‌ ಬಚ್ಚನ್‌ ಅವರ ಪ್ರೀತಿ, ಕಾಳಜಿಗೆ ನನ್ನ ಹೃದಯ ಸ್ಪರ್ಶಿಸಿದೆ ಎಂದಿದ್ದಾರೆ.

ನನ್ನನ್ನು ಪ್ರೀತಿಸುವ, ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿದ ನಿಮ್ಮೆಲ್ಲರಿಗೂ ನನ್ನ ಪ್ರಾಮಾಣಿಕ ಕೃತಜ್ಞತೆ ಎಂದು ತಿಳಿಸಿದ್ದಾರೆ.

ಅನಾರೋಗ್ಯದ ಕಾರಣ ರಜನಿಕಾಂತ್ ಅವರನ್ನು ಸೆ.30 ರಂದು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಟ್ರಾನ್ಸ್‌ಕ್ಯಾಥೆಟರ್ ವಿಧಾನವನ್ನು ಬಳಸಿ ಚಿಕಿತ್ಸೆ ನೀಡಲಾಯಿತು.  ಅವರು ಚೇತರಿಸಿಕೊಂಡು ಮನೆಗೆ ಬಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

150ಕ್ಕೂ ಅಧಿಕ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದ ಹಿರಿಯ ನಟ ಮೋಹನ್ ರಾಜ್ ಇನ್ನಿಲ್ಲ