Webdunia - Bharat's app for daily news and videos

Install App

ಮುಂದಿನ ವರ್ಷದಿಂದ ಪಠ್ಯ ವಿಷಯದಲ್ಲಿ ಡಾ. ರಾಜ್ ಕುಮಾರ್ ಜೀವನ ಚರಿತ್ರೆ: ಜಿ. ಪರಮೇಶ್ವರ್

Webdunia
ಸೋಮವಾರ, 24 ಏಪ್ರಿಲ್ 2017 (10:29 IST)
ಇವತ್ತು ವರನಟ ಡಾ. ರಾಜ್ ಕುಮಾರ್ ಅವರ 89ನೇ ಜನ್ಮದಿನ. ಡಾ. ರಾಜ್ ಕುಮಾರ್ ಸಮಾಧಿ ಬಳಿಯಲ್ಲಿ ಅಭಿಮಾನಿಗಳ ದಂಡೇ ನೆರೆದಿದೆ. ಅನ್ನದಾ, ನೇತ್ರದಾನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನ ನಡೆಸಲಾಗುತ್ತಿದೆ. ಈ ಮಧ್ಯೆ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸಹ ಯಶವಂತಪುರದ ಕಂಠೀರವ ಸ್ಟುಡಿಯೋದಲ್ಲಿರುವ ಅಣ್ಣಾವ್ರ ಸಮಾಧಿ ಸ್ಥಳಕ್ಕೆ ತೆರಳಿ ನಮನ ಸಲ್ಲಿಸಿದರು.

ಈ ಸಂದರ್ಭ ಮಾಧ್ಯಮಗಳ ಜೊತೆ ಮಾತನಾಡಿದ ಪರಮೇಶ್ವರ್, ಡಾ.ರಾಜ್ ಕುಮಾರ್ ಅಪ್ರತಿಮ ಕಲಾವಿದರು. ಭಾರತೀಯ ಚಿತ್ರರಂಗ ಕಂಡ ಅದ್ಬುತ ನಟರಲ್ಲಿ ಡಾ. ರಾಜ್ ಕುಮಾರ್ ಸಹ ಒಬ್ಬರು. ರಂಗಭೂಮಿ ಮತ್ತು ಚಿತ್ರರಂಗಕ್ಕೆ ರಾಜ್ ಕುಮಾರ್ ಕೊಡುಗೆ ಅಪಾರ. ಯುವ ಪೀಳಿಗೆಗೆ ಡಾ. ರಾಜ್ ಕುಮಾರ್ ಮಾದರಿ. ಹೀಗಾಗಿ, ಮುಂದಿನ ವರ್ಷದಿಂದ ಡಾ. ರಾಜ್ ಕುಮಾರ್ ಜೀವನ ಚರಿತ್ರೆಯನ್ನ ಪಠ್ಯ ವಿಷಯದಲ್ಲಿ ಅಳವಡಿಸಲಾಗುವುದೆಂದು ಪರಮೇಶ್ವರ್ ಹೇಳಿದ್ದಾರೆ. ಅಣ್ಣಾವ್ರ ಕುಟುಂಬ ಮತ್ತು ಅವರ ಮಕ್ಕಳ ಜೊತೆ ಸರ್ಕಾರ ಸದಾ ಇರುತ್ತದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ. 

ಇದೇವೇಳೆ, ಅಣ್ಣಾವ್ರ ಮಕ್ಕಳಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ಭೇಟಿ ನೀಡಿ ಅಣ್ಣಾವ್ರ ಸಮಾಧಿಗೆ ನಮನ ಸಲ್ಲಿಸಿದರು. ಶಿವರಾಜ್ ಕುಮಾರ್ ಅಭಿನಯದ ಬಂಗಾರ ಸನ್ ಅಫ್ ಬಂಗಾರದ ಮನುಷ್ಯ ಚಿತ್ರದ ಟೀಸರ್ ಕೂಡ ಅಣ್ಣಾವ್ರ ಸಮಾಧಿ ಬಳಿಯೇ ಬಿಡುಗಡೆಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಇಟಲಿಯ ಉದ್ಯಮಿಯೊಂದಿಗೆ ಉಂಗುರ ಬದಲಾಯಿಸಿಕೊಂಡ ಅರ್ಜುನ್ ಸರ್ಜಾ ಕಿರಿಯ ಪುತ್ರಿ ಅಂಜನಾ

Drug Case:ನಟಿ ನೀಡಿದ ದೂರಿನಂತೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅರೆಸ್ಟ್‌

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ಮುಂದಿನ ಸುದ್ದಿ
Show comments