Webdunia - Bharat's app for daily news and videos

Install App

ಅಪ್ಪು ತೀರಿಕೊಂಡಾಗ ಬರದಿರುವುದಕ್ಕೆ ಕಾರಣ ತಿಳಿಸಿದ ರಜನೀಕಾಂತ್

Webdunia
ಮಂಗಳವಾರ, 1 ನವೆಂಬರ್ 2022 (19:00 IST)
Photo Courtesy: Twitter
ಬೆಂಗಳೂರು: ಪುನೀತ್ ರಾಜ್ ಕುಮಾರ್ ತೀರಿಕೊಂಡಾಗ ತಾನು ಬರದೇ ಇರುವುದಕ್ಕೆ ನಿಜ ಕಾರಣವೇನೆಂದು ಸೂಪರ್ ಸ್ಟಾರ್ ರಜನೀಕಾಂತ್ ಇಂದು ಬಯಲು ಮಾಡಿದ್ದಾರೆ.

ಪುನೀತ್ ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ ಬಳಿಕ ವೇದಿಕೆಯಲ್ಲಿ ಮಾತನಾಡಿದ ರಜನಿ, ಪುನೀತ್ ಬಗ್ಗೆ ಹಳೆಯ ನೆನಪುಗಳನ್ನು ಹಂಚಿಕೊಂಡರು.

‘ಪುನೀತ್ ತೀರಿಕೊಂಡಾಗ ನನಗೆ ಆಪರೇಷನ್ ಆಗಿ ಐಸಿಯುವಿನಲ್ಲಿದ್ದೆ. ಹೀಗಾಗಿ ಆಗ ವಿಷಯ ಹೇಳುವುದು ಬೇಡ ಎಂದು ನನಗೆ ಮೂರು ದಿನ ಕಳೆದ ಮೇಲೆ ಸುದ್ದಿ ತಿಳಿಸಿದರು. ಹಾಗಾಗಿ ಆಗ ಬರಲಾಗಲಿಲ್ಲ. ಚಿಕ್ಕ ಮಗುವಾಗಿದ್ದಾಗ ಅಣ್ಣಾವ್ರ ಜೊತೆ ನಾನು ಪುನೀತ್ ನನ್ನು ನೋಡಿದ್ದೆ. ಆಗ ಡಾ.ರಾಜ್ ಕುಮಾರ್ ಅವರು ಶಬರಿಮಲೆಗೆ ಕಾಲ್ನಡಿಗೆಯಲ್ಲಿ ತೆರಳಿದ್ದರು. ಅವರ ಜೊತೆ ಅಪ್ಪುವೂ ಇದ್ದ. ಆಗ ಅವನಿಗೆ ಕೇವಲ ನಾಲ್ಕು ವರ್ಷ. ಆಗಲೇ ಎಲ್ಲರ ಜೊತೆ ಅವನೂ ಸ್ವಾಮಿಯೇ ಶರಣಂ ಅಯ್ಯಪ್ಪ ಎನ್ನುತ್ತಿದ್ದ. ಹೊಳೆಯುವ ಕಣ್ಣುಗಳ ಆ ಹುಡುಗ ದೊಡ್ಡವನಾಗಿ ಅಪ್ಪು ಸಿನಿಮಾ ಮಾಡಿದ್ದಾಗ ಅಣ್ಣಾವ್ರು ಹೇಳಿದ್ದಕ್ಕೆ ಅವರ ಜೊತೆ ಕುಳಿತು ಆ ಸಿನಿಮಾ ನೋಡಿದ್ದೆ. ಎಷ್ಟು ಅದ್ಭುತವಾಗಿ ಫೈಟ್, ಡ್ಯಾನ್ಸ್ ಮಾಡಿದ್ದ ಅಪ್ಪು. ಆಗಲೇ ಅಣ್ಣಾವ್ರು ನನಗೆ ಈ ಸಿನಿಮಾ 100 ದಿನ ಓಡಿದರೆ ಆ ಸಮಾರಂಭಕ್ಕೆ ನೀವು ಬರಬೇಕು ಎಂದಿದ್ದರು. ಅದರಂತೆ ಇಲ್ಲೇ ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮಕ್ಕೆ ನಾನು ಬಂದಿದ್ದೆ’ ಎಂದು ರಜನಿ ಹಳೆಯ ದಿನಗಳನ್ನು ನೆನಪು ಮಾಡಿಕೊಂಡರು.


-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa: ದರ್ಶನ್ ಆಂಡ್ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್

Renukaswamy Case: ಎರಡನೇ ಭಾರೀ ಜೈಲು ಸೇರಿದ ದರ್ಶನ್‌

ಏನೂ ಆಗಲ್ಲ ಬಾಸ್, ನಿಮ್ಮೊಂದಿಗೆ ನಾವಿದ್ದೇವೆ: ಡಿಬಾಸ್ ಗೆ ಫ್ಯಾನ್ಸ್ ಫುಲ್ ಸಪೋರ್ಟ್

ಫೇವರೇಟ್‌ ಕಲರ್‌ನ ಬಟ್ಟೆ, ಲಿಪ್‌ಸ್ಟಿಕ್‌, ಕ್ಲಿಪ್‌ ಹಾಕಿ ಗ್ಲಾಮರ್‌ ಲುಕ್‌ನಲ್ಲೇ ಹೊರಟ ಪವಿತ್ರಾ

ಜೀಪ್ ನಲ್ಲೂ ಬರಲಿಲ್ಲ, ಪತ್ನಿ ಬಳಿಯೂ ಬರಲಿಲ್ಲ, ದರ್ಶನ್ ಪ್ಲ್ಯಾನ್ ಏನು

ಮುಂದಿನ ಸುದ್ದಿ
Show comments