Webdunia - Bharat's app for daily news and videos

Install App

ನಾಡದೇವತೆಗೆ ಅವಮಾನ: ಕೊನೆಗೂ ಕ್ಷಮೆ ಕೇಳಿದ ರಕ್ಷಕ್ ಬುಲೆಟ್

Krishnaveni K
ಗುರುವಾರ, 27 ಮಾರ್ಚ್ 2025 (15:36 IST)
ಬೆಂಗಳೂರು: ರಿಯಾಲಿಟಿ ಶೋ ಒಂದರಲ್ಲಿ ನಾಡದೇವತೆ ಚಾಮುಂಡಿ ತಾಯಿಗೆ ಅವಮಾನ ಮಾಡುವಂತಹ ಡೈಲಾಗ್ ಹೇಳಿದ್ದಕ್ಕೆ ಹಿಂದೂಗಳ ಆಕ್ರೋಶಕ್ಕೆ ಗುರಿಯಾಗಿದ್ದ ರಕ್ಷಕ್ ಬುಲೆಟ್ ಕೊನೆಗೂ ಕ್ಷಮೆ ಯಾಚಿಸಿದ್ದಾರೆ.

ರಕ್ಷಕ್ ಬುಲೆಟ್ ಕ್ಷಮೆ ಕೇಳಬೇಕು. ಚಾಮುಂಡಿ ತಾಯಿಗೆ ತಪ್ಪು ಕಾಣಿಕೆ ಹಾಕಬೇಕು. ಇಲ್ಲದೇ ಹೋದರೆ ಅವರ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ಹಿಂದೂ ಸಂಘಟನೆಗಳು ಎಚ್ಚರಿಕೆ ನೀಡಿದ್ದವು. ಪೊಲೀಸ್ ಆಯುಕ್ತರಿಗೆ ದೂರು ನೀಡಲೂ ಮುಂದಾಗಿದ್ದರು.

ಇದೀಗ ತಮ್ಮ ತಪ್ಪಿನ ಅರಿವಾಗುತ್ತಿದ್ದಂತೇ ರಕ್ಷಕ್ ಬುಲೆಟ್ ಕ್ಷಮೆ ಯಾಚಿಸಿದ್ದಾರೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗು ಭರ್ಜರಿ ಬ್ಯಾಚುಲರ್ಸ್ ರಿಯಾಲಿಟಿ ಶೋನಲ್ಲಿ ತನ್ನ ಜೊತೆಗಾತಿಯನ್ನು ಹೊಗಳುವ ಭರದಲ್ಲಿ ನಾಡದೇವತೆ ಚಾಮುಂಡಿ ತಾಯಿಯೇ ಓಲೆ, ಆಭರಣ, ಸೀರೆ ಬಿಚ್ಚಿ ಬಂದಂತಿದ್ದೀಯಾ ಎಂದಿದ್ದರು.

 ಅವರ ಈ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ವಿವಾದದ ಬೆನ್ನಲ್ಲೇ ಕ್ಷಮೆ ಯಾಚಿಸಿದ ರಕ್ಷಕ್ ಬುಲೆಟ್ ಯಾರಿಗಾದರೂ ನನ್ನ ಮಾತಿನಿಂದ ಬೇಸರವಾದಲ್ಲಿ ಕ್ಷಮೆ ಯಾಚಿಸುತ್ತೇನೆ. ಮುಂದೆ ಇಂತಹ ಅಚಾತುರ್ಯವಾಗದಂತೆ ನೋಡಿಕೊಳ್ಳುತ್ತೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಚಿನ್ನ ಸಾಗಣೆ ಪ್ರಕರಣ: ಬೆಚ್ಚಿಬೀಳಿಸುತ್ತೆ ರನ್ಯಾ ರಾವ್‌ ಮಾಸ್ಟರ್ ಮೈಂಡ್‌

ಎಕ್ಕ ಬಿಡುಗಡೆಗೆ ದಿನಗಣನೆ ಮಾಡುತ್ತಿರುವಾಗಲೇ ಮಂತ್ರಾಲಯಕ್ಕೆ ಯುವ ರಾಜ್‌ಕುಮಾರ್ ಭೇಟಿ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಪಂಜಾಬಿ ನಟಿ ತಾನಿಯಾ ಮಲತಂದೆ ಮೇಲೆ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಮುಂದಿನ ಸುದ್ದಿ
Show comments