Webdunia - Bharat's app for daily news and videos

Install App

ದರ್ಶನ್ ಗಾಗಿ ಹುಟ್ಟುಹಬ್ಬವನ್ನೇ ಆಚರಿಸಿಕೊಳ್ಳಲ್ಲ ಎಂದ ರಕ್ಷಕ್ ಬುಲೆಟ್

Krishnaveni K
ಸೋಮವಾರ, 17 ಜೂನ್ 2024 (13:15 IST)
Photo Credit: Instagram
ಬೆಂಗಳೂರು: ಬಿಗ್ ಬಾಸ್ ನಿಂದ ಖ್ಯಾತರಾದ, ಬುಲೆಟ್ ಪ್ರಕಾಶ್ ಪುತ್ರ, ನಟ ರಕ್ಷಕ್ ಬುಲೆಟ್ ಈಗ ದರ್ಶನ್ ಗಾಗಿ ತಮ್ಮ ಹುಟ್ಟುಹಬ್ಬವನ್ನೇ ಆಚರಿಸದಿರಲು ತೀರ್ಮಾನಿಸಿದ್ದಾರೆ.

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಅವರು ಹತ್ತಿರದಲ್ಲಿರುವವರು ಕಷ್ಟದಲ್ಲಿದ್ದಾಗ ಬರ್ತ್ ಡೇ ಆಚರಿಸಿಕೊಳ್ಳುವುದು ಸರಿಯಲ್ಲ ಎಂದಿದ್ದಾರೆ. ನೇರವಾಗಿ ದರ್ಶನ್ ಹೆಸರು ಹೇಳದೇ ಇದ್ದರೂ ಅವರು ಅವರ ಕುರಿತಾಗಿಯೇ ಈ ಮಾತು ಹೇಳಿದ್ದಾರೆ ಎಂಬುದು ಅರ್ಥಮಾಡಿಕೊಳ್ಳಬಹುದಾಗಿದೆ.

ರಕ್ಷಕ್ ಬುಲೆಟ್ ಕೂಡಾ ದರ್ಶನ್ ಆಪ್ತಬಳಗದಲ್ಲಿ ಗುರುತಿಸಿಕೊಂಡಿದ್ದರು. ಬುಲೆಟ್ ಪ್ರಕಾಶ್ ಮತ್ತು ದರ್ಶನ್ ಉತ್ತಮ ಸ್ನೇಹಿತರಾಗಿದ್ದರು. ಬುಲೆಟ್ ಪ್ರಕಾಶ್ ತೀರಿಕೊಂಡಾಗ ದರ್ಶನ್ ಅವರ ಕುಟುಂಬಕ್ಕೆ ಸಾಕಷ್ಟು ಸಹಾಯ ಮಾಡಿದ್ದರು. ಇದಾದ ಬಳಿಕ ದರ್ಶನ್ ಜೊತೆಗೆ ರಕ್ಷಕ್ ಸಂಪರ್ಕ ಹೆಚ್ಚಾಗಿತ್ತು.

ಜೂನ್ 21 ರಂದು ರಕ್ಷಕ್ ಹುಟ್ಟುಹಬ್ಬವಿದೆ. ಈ ದಿನ ಅವರ ಹೊಸ ಸಿನಿಮಾ ಘೋಷಣೆಯಾಗುವ ಸಾಧ್ಯತೆಯಿದೆ. ಆದರೆ ದರ್ಶನ್ ಗಾಗಿ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸದೇ ಇರಲು ತೀರ್ಮಾನಿಸಿದ್ದಾರೆ. ಸದ್ಯಕ್ಕೆ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ದರ್ಶನ್ ಜೈಲು ಪಾಲಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ನಟ ದರ್ಶನ್ ಗೆ ಈಗ ಎಲ್ಲೇ ಹೋದ್ರೂ ವೈಫು ವಿಜಿ ಜೊತೆಗಿರಲೇಬೇಕು

Prithvi Bhat marriage Audio viral: ಮನೆ ಬಿಟ್ಟು ಓಡಿ ಹೋಗಿ ಮದುವೆಯಾದ ಗಾಯಕಿ ಪೃಥ್ವಿ ಭಟ್: ಮನೆಯವರಿಂದ ಗಂಭೀರ ಆರೋಪ

Rocking star Yash: ಉಜ್ಜೈನಿ ಮಹಾಕಾಳನಿಗೆ ಪೂಜೆ ಸಲ್ಲಿಸಿದ ರಾಕಿಂಗ್ ಸ್ಟಾರ್ ಯಶ್: ಹಿಂದಿಯಲ್ಲಿ ಮಾತನಾಡಿದ ವಿಡಿಯೋ

ಇಟಲಿಯ ಉದ್ಯಮಿಯೊಂದಿಗೆ ಉಂಗುರ ಬದಲಾಯಿಸಿಕೊಂಡ ಅರ್ಜುನ್ ಸರ್ಜಾ ಕಿರಿಯ ಪುತ್ರಿ ಅಂಜನಾ

Drug Case:ನಟಿ ನೀಡಿದ ದೂರಿನಂತೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅರೆಸ್ಟ್‌

ಮುಂದಿನ ಸುದ್ದಿ
Show comments