Webdunia - Bharat's app for daily news and videos

Install App

ಉತ್ತರಕಾಂಡ ಕೈಬಿಟ್ಟ ರಮ್ಯಾ ಈ ಸಿನಿಮಾದಲ್ಲಿ ಎಂಟ್ರಿ ಕೊಡ್ತಾರಂತೆ

Krishnaveni K
ಬುಧವಾರ, 10 ಏಪ್ರಿಲ್ 2024 (15:35 IST)
Photo Courtesy: Instagram
ಬೆಂಗಳೂರು: ನಟಿ ರಮ್ಯಾ ಸ್ಯಾಂಡಲ್ ವುಡ್ ಗೆ ಕಮ್ ಬ್ಯಾಕ್ ಮಾಡುವುದನ್ನು ಕಾದಿರುವ ಅಭಿಮಾನಿಗಳಿಗೆ ಕಾದು ಕಾದು ಸುಸ್ತಾಗಿದೆ. ಇದೀಗ ರಮ್ಯಾ ಒಂದು ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.

ಉತ್ತರಕಾಂಡ ಸಿನಿಮಾದಲ್ಲಿ ನಟಿ ರಮ್ಯಾ ನಾಯಕಿಯಾಗಿ ಅಭಿನಯಿಸಬೇಕಿತ್ತು. ಈ ಸಿನಿಮಾಗೆ ಡಾಲಿ ಧನಂಜಯ್ ನಾಯಕ. ಮುಹೂರ್ತ ಕಾರ್ಯಕ್ರಮಕ್ಕೂ ರಮ್ಯಾ ಬಂದಿದ್ದರು. ಆದರೆ ಕೊನೆಯ ಕ್ಷಣದಲ್ಲಿ ರಾಜಕಾರಣದ ನೆಪ ಹೇಳಿ ರಮ್ಯಾ ಸಿನಿಮಾದಿಂದ ಹೊರಬಂದಿದ್ದಾರೆ.

ಇದು ಅವರ ಅಭಿಮಾನಿಗಳಿಗೆ ತೀವ್ರ ನಿರಾಸೆ ಉಂಟು ಮಾಡಿತ್ತು. ಆದರೆ ಈಗ ಸಿದ್ಲಿಂಗು 2 ಚಿತ್ರತಂಡ ನೀಡಿದ ಪೋಸ್ಟರ್ ಒಂದು ನೋಡಿದರೆ ಅಭಿಮಾನಿಗಳಿಗೆ ಕುತೂಹಲ ಮೂಡಿದೆ. ಸಿದ್ಲಿಂಗು ಸಿನಿಮಾದ ಮೊದಲ ಭಾಗದಲ್ಲಿ ರಮ್ಯಾ ಅಭಿನಯಿಸಿದ್ದರು. ಮೊದಲ ಭಾಗದಲ್ಲಿ ನಾಯಕಿ ಸತ್ತು ಹೋಗುತ್ತಾಳೆ. ಇದೀಗ ಸಿದ್ಲಿಂಗು 2 ಸಿನಿಮಾ ಸೆಟ್ಟೇರಿದೆ. ಈ ಸಿನಿಮಾದಲ್ಲೂ ನಾಯಕರಾಗಿ ಲೂಸ್ ಮಾದ ಯೋಗಿ ಅಭಿನಯಿಸುತ್ತಿದ್ದಾರೆ. ಅವರಿಗೆ ನಾಯಕಿಯಾಗಿ ಸೋನು ಗೌಡ ಅಭಿನಯಿಸುತ್ತಿದ್ದಾರೆ.

ಈ ಸಿನಿಮಾದಲ್ಲಿ ನಾಯಕಿಯಾಗಿಯಂತೂ ರಮ್ಯಾ ಇರಲ್ಲ. ಆದರೆ ಚಿತ್ರತಂಡ ಯುಗಾದಿ ನಿಮಿತ್ತ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದೆ. ಈ ಪೋಸ್ಟರ್ ನಲ್ಲಿ ‘ಬೇವು ಬೆಲ್ಲದೊಂದಿಗೆ ಅತಿಥಿಯಾಗಿ ಬಂದರೂ ಬರಬಹುದು. ಅವರ ಹೆಸರಿನ ಮೊದಲ ಅಕ್ಷರ ‘ರ’  ಎಂದು ಬರೆಯಲಾಗಿದೆ. ಈ ಬರಹ ನೋಡಿದರೆ ಚಿತ್ರತಂಡ ರಮ್ಯಾರನ್ನು ಕರೆತರುವ ಪ್ರಯತ್ನ ನಡೆಸುತ್ತಿದೆ ಎಂಬ ಅನುಮಾನ ಅಭಿಮಾನಿಗಳದ್ದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments