Webdunia - Bharat's app for daily news and videos

Install App

ಉತ್ತರಕಾಂಡ ಕೈಬಿಟ್ಟ ರಮ್ಯಾ ಈ ಸಿನಿಮಾದಲ್ಲಿ ಎಂಟ್ರಿ ಕೊಡ್ತಾರಂತೆ

Krishnaveni K
ಬುಧವಾರ, 10 ಏಪ್ರಿಲ್ 2024 (15:35 IST)
Photo Courtesy: Instagram
ಬೆಂಗಳೂರು: ನಟಿ ರಮ್ಯಾ ಸ್ಯಾಂಡಲ್ ವುಡ್ ಗೆ ಕಮ್ ಬ್ಯಾಕ್ ಮಾಡುವುದನ್ನು ಕಾದಿರುವ ಅಭಿಮಾನಿಗಳಿಗೆ ಕಾದು ಕಾದು ಸುಸ್ತಾಗಿದೆ. ಇದೀಗ ರಮ್ಯಾ ಒಂದು ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.

ಉತ್ತರಕಾಂಡ ಸಿನಿಮಾದಲ್ಲಿ ನಟಿ ರಮ್ಯಾ ನಾಯಕಿಯಾಗಿ ಅಭಿನಯಿಸಬೇಕಿತ್ತು. ಈ ಸಿನಿಮಾಗೆ ಡಾಲಿ ಧನಂಜಯ್ ನಾಯಕ. ಮುಹೂರ್ತ ಕಾರ್ಯಕ್ರಮಕ್ಕೂ ರಮ್ಯಾ ಬಂದಿದ್ದರು. ಆದರೆ ಕೊನೆಯ ಕ್ಷಣದಲ್ಲಿ ರಾಜಕಾರಣದ ನೆಪ ಹೇಳಿ ರಮ್ಯಾ ಸಿನಿಮಾದಿಂದ ಹೊರಬಂದಿದ್ದಾರೆ.

ಇದು ಅವರ ಅಭಿಮಾನಿಗಳಿಗೆ ತೀವ್ರ ನಿರಾಸೆ ಉಂಟು ಮಾಡಿತ್ತು. ಆದರೆ ಈಗ ಸಿದ್ಲಿಂಗು 2 ಚಿತ್ರತಂಡ ನೀಡಿದ ಪೋಸ್ಟರ್ ಒಂದು ನೋಡಿದರೆ ಅಭಿಮಾನಿಗಳಿಗೆ ಕುತೂಹಲ ಮೂಡಿದೆ. ಸಿದ್ಲಿಂಗು ಸಿನಿಮಾದ ಮೊದಲ ಭಾಗದಲ್ಲಿ ರಮ್ಯಾ ಅಭಿನಯಿಸಿದ್ದರು. ಮೊದಲ ಭಾಗದಲ್ಲಿ ನಾಯಕಿ ಸತ್ತು ಹೋಗುತ್ತಾಳೆ. ಇದೀಗ ಸಿದ್ಲಿಂಗು 2 ಸಿನಿಮಾ ಸೆಟ್ಟೇರಿದೆ. ಈ ಸಿನಿಮಾದಲ್ಲೂ ನಾಯಕರಾಗಿ ಲೂಸ್ ಮಾದ ಯೋಗಿ ಅಭಿನಯಿಸುತ್ತಿದ್ದಾರೆ. ಅವರಿಗೆ ನಾಯಕಿಯಾಗಿ ಸೋನು ಗೌಡ ಅಭಿನಯಿಸುತ್ತಿದ್ದಾರೆ.

ಈ ಸಿನಿಮಾದಲ್ಲಿ ನಾಯಕಿಯಾಗಿಯಂತೂ ರಮ್ಯಾ ಇರಲ್ಲ. ಆದರೆ ಚಿತ್ರತಂಡ ಯುಗಾದಿ ನಿಮಿತ್ತ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದೆ. ಈ ಪೋಸ್ಟರ್ ನಲ್ಲಿ ‘ಬೇವು ಬೆಲ್ಲದೊಂದಿಗೆ ಅತಿಥಿಯಾಗಿ ಬಂದರೂ ಬರಬಹುದು. ಅವರ ಹೆಸರಿನ ಮೊದಲ ಅಕ್ಷರ ‘ರ’  ಎಂದು ಬರೆಯಲಾಗಿದೆ. ಈ ಬರಹ ನೋಡಿದರೆ ಚಿತ್ರತಂಡ ರಮ್ಯಾರನ್ನು ಕರೆತರುವ ಪ್ರಯತ್ನ ನಡೆಸುತ್ತಿದೆ ಎಂಬ ಅನುಮಾನ ಅಭಿಮಾನಿಗಳದ್ದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮುಂದಿನ ಸುದ್ದಿ
Show comments