Select Your Language

Notifications

webdunia
webdunia
webdunia
webdunia

ಎಸ್.ಪಿಬಿ ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸಿದ ರಂಜನೀಕಾಂತ್

ಎಸ್.ಪಿಬಿ ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸಿದ ರಂಜನೀಕಾಂತ್
ಚೆನ್ನೈ , ಬುಧವಾರ, 19 ಆಗಸ್ಟ್ 2020 (10:26 IST)
ಚೆನ್ನೈ : ಖ್ಯಾತ ಹಿನ್ನಲೆ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯ ಕೊರೊನಾದಿಂದ ಬಳಲುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಆದಕಾರಣ ಅವರ ಕೋಟ್ಯಾಂತರ ಅಭಿಮಾನಿಗಳು , ಆಪ್ತರು, ಚಿತ್ರರಂಗದವರು ಅವರು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತಿದ್ದಾರೆ.

ನಟ ರಜನೀಕಾಂತ್ ಕೂಡ ಎಸ್.ಪಿ.ಬಾಲಸುಬ್ರಹ್ಮಣ್ಯ ಆರೋಗ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಅವರು ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡರುವ ರಜನಿಕಾಂತ್, ಎಸ್.ಪಿ.ಬಾಲಸುಬ್ರಹ್ಮಣ್ಯ ಅಪಾಯದ ಮಟ್ಟವನ್ನು ದಾಟಿದ್ದಾರೆ. ಎಸ್.ಪಿ.ಬಾಲಸುಬ್ರಹ್ಮಣ್ಯ ಅವರು 50 ವರ್ಷಗಳಿಗಿಂತಲೂ ಹೆಚ್ಚು ಕಾಲ ಹಲವು ಭಾಷೆಗಳಲ್ಲಿ ಸುಮಧುರ ಕಂಠದ ಮೂಲಕ ಕೋಟ್ಯಾಂತರ ಅಭಿಮಾನಿಗಳನ್ನು ಮನಗೆದ್ದಿದ್ದಾರೆ. ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಬಾಲಿವುಡ್ ಫೈಟ್ : ಕರಣ್ ಜೋಹರ್ ಗೆ ನೀಡಿದ್ದ ಪದ್ಮಶ್ರೀ ವಾಪಸ್ ?