Webdunia - Bharat's app for daily news and videos

Install App

12 ಎಕರೆ ಜಮೀನು, ರಾಜಕಾರಣಿಗಳ ನಂಟು: ಅಬ್ಬಬ್ಬಾ ರನ್ಯಾ ರಾವ್ ಹೇಗೆಲ್ಲಾ ದುಡ್ಡು ಮಾಡ್ಕೊಂಡ್ರು ಗೊತ್ತಾ

Krishnaveni K
ಸೋಮವಾರ, 10 ಮಾರ್ಚ್ 2025 (14:30 IST)
ಬೆಂಗಳೂರು: ಚಿನ್ನ ಕಳ್ಳಸಾಗಣಿಕೆ ಕೇಸ್ ನಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಕುರಿತ ಒಂದೊಂದೇ ವಿಚಾರಗಳು ಬಯಲಾಗುತ್ತಿವೆ. ಈಕೆಗೆ ಕೆಐಡಿಬಿ ವತಯಿಂದ 12 ಎಕರೆ ಜಮೀನು ಸಿಕ್ಕಿದ್ದು ಹೇಗೆ, ರಾಜಕೀಯ ನಾಯಕರ ನಂಟಿನ ಬಗ್ಗೆ ಒಂದೊಂದೇ ವಿಚಾರಗಳು ಹೊರಬೀಳುತ್ತಿವೆ.

ನಟಿ ರನ್ಯಾ ರಾವ್ ಗೆ ಸರ್ಕಾರದಿಂದಲೇ 12 ಎಕರೆ ಜಮೀನು ನೀಡಲಾಗಿದೆ ಎಂದು ಸುದ್ದಿಯಾಗಿತ್ತು. ಇದರ ನಡುವೆ ಹಾಲಿ ಸರ್ಕಾರದ ಇಬ್ಬರು ಸಚಿವರ ಜೊತೆ ರನ್ಯಾಗೆ ನಂಟಿತ್ತು ಎನ್ನುವುದು ಬಯಲಾಗಿತ್ತು. ಹೀಗಾಗಿ ವಿಪಕ್ಷ ಬಿಜೆಪಿ ಹಾಲಿ ಸರ್ಕಾರದ ಕೃಪಾಕಟಾಕ್ಷದಿಂದಲೇ ರನ್ಯಾಗೆ 12 ಎಕರೆ ಜಮೀನು ಸಿಕ್ಕಿದೆ ಎಂದು ವಾಗ್ದಾಳಿ  ನಡೆಸಿತ್ತು.

ಇದೀಗ ರನ್ಯಾಗೆ ಜಮೀನು ನೀಡಿರುವ ಬಗ್ಗೆ ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ನಿಗಮ (ಕೆಐಡಿಬಿ) ಇದರ ಬಗ್ಗೆ ಸ್ಪಷ್ಟನೆ ನೀಡಿದೆ. ರನ್ಯಾಗೆ ಜಮೀನು ಮಂಜೂರು ಮಾಡಿದ್ದು ಹಿಂದಿನ ಸರ್ಕಾರ, ಇದು 2023 ರಲ್ಲಿ ಮಂಜೂರಾಗಿತ್ತು. ಸ್ಟೀಲ್ ಕಾರ್ಖಾನೆಯೊಂದನ್ನು ಸ್ಥಾಪಿಸುವ ಉದ್ದೇಶಕ್ಕೆ ಮಂಜೂರು ಮಾಡಲಾಗಿತ್ತು ಎಂದು ಕೆಐಡಿಬಿ ಸ್ಪಷ್ಟನೆ ನೀಡಿದೆ.

 
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ರನ್ಯಾರನ್ನು ಬಂಧಿಸುವಾಗ 12.56 ಕೋಟಿ ರೂ. ಮೊತ್ತದ ಚಿನ್ನ ವಶಪಡಿಸಿಕೊಳ್ಳಲಾಗಿತ್ತು. ಮನೆಯಿಂದ 2.06 ಕೋಟಿ ರೂ. ಮೊತ್ತದ ಚಿನ್ನ, 2.67 ಕೋಟಿ ರೂ. ಮೊತ್ತದ ನಗದು ವಶಪಡಿಸಿಕೊಳ್ಳಲಾಗಿತ್ತು. ಹೀಗಾಗಿ ಈಕೆಯ ಐಷಾರಾಮಿ ಜೀವನದ ಹಿಂದಿನ ವ್ಯಕ್ತಿಗಳು ಯಾರು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments