Webdunia - Bharat's app for daily news and videos

Install App

ರೇಪ್ ಕೇಸ್: ಆ ಒಂದು ಕಾರಣಕ್ಕೆ ಜಾನಿ ಮಾಸ್ಟರ್‌ಗೆ ನಾಲ್ಕು ದಿನದ ಜಾಮೀನು ನೀಡಿದ ಕೋರ್ಟ್‌

Sampriya
ಗುರುವಾರ, 3 ಅಕ್ಟೋಬರ್ 2024 (15:44 IST)
Photo Courtesy X
ಆಂಧ್ರಪ್ರದೇಶ: ಅತ್ಯಾಚಾರ ಪ್ರಕರಣದಲ್ಲಿ ಬಂಧಿಯಾಗಿರುವ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಅವರಿಗೆ ರಂಗಾ ರೆಡ್ಡಿ ಜಿಲ್ಲಾ ನ್ಯಾಯಾಲಯ ಗುರುವಾರ (ಅಕ್ಟೋಬರ್ 3) ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದೆ.

ವರದಿ ಪ್ರಕಾರ ಜಾಮೀನು ಅರ್ಜಿಯನ್ನು ಅ6 ರಿಂದ 10 ರವರೆಗೆ ಮಂಜೂರು ಮಾಡಲಾಗಿದೆ. ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರ ಉಪಸ್ಥಿತಿಯ ಮಹತ್ವವನ್ನು ಪರಿಗಣಿಸಿ ಜಾಮೀನು ನೀಡಲು ನಿರ್ಧರಿಸಲಾಗಿದೆ.

ಕೋರ್ಟ್ ನೀಡಿದ ಷರತ್ತುಗಳು ಹೀಗಿದೆ: ಅಕ್ಟೋಬರ್ 10 ರಂದು ಬೆಳಿಗ್ಗೆ 10 ಗಂಟೆಗೆ ನ್ಯಾಯಾಲಯಕ್ಕೆ ಹಾಜರಾಗಬೇಕು, ತಲಾ ₹ 2 ಲಕ್ಷದ ಇಬ್ಬರು ಶ್ಯೂರಿಟಿ ನೀಡಬೇಕು ಮತ್ತು ಈ ಅವಧಿಯಲ್ಲಿ ಮಾಧ್ಯಮ ಸಂದರ್ಶನಗಳನ್ನು ನೀಡದಂತೆ ಅಥವಾ ಯಾವುದೇ ಹೊಸ ಮಧ್ಯಂತರ ಜಾಮೀನು ಅರ್ಜಿಗಳನ್ನು ಸಲ್ಲಿಸದಂತೆ ಜಾನಿ ಮಾಸ್ಟರ್‌ಗೆ ನ್ಯಾಯಾಲಯ ಷರತ್ತುಗಳನ್ನು ವಿಧಿಸಿದೆ.

ಧನುಷ್ ಮತ್ತು ನಿತ್ಯಾ ಮೆನೆನ್ ಅಭಿನಯದ ತಿರುಚಿತ್ರಾಂಬಲಂ ಚಿತ್ರದ ಮೇಘಂ ಕರುಕ್ಕಾಟ ಹಾಡಿನಲ್ಲಿನ ನೃತ್ಯ ಸಂಯೋಜನೆಗೆ ಇವರು ರಾಷ್ಟ್ರಮಟ್ಟದ ಮನ್ನಣೆಯನ್ನು ಪಡೆದಿದ್ದಾರೆ. ಆಗಸ್ಟ್‌ನಲ್ಲಿ ರಾಷ್ಟ್ರೀಯ ಪ್ರಶಸ್ತಿಗಳನ್ನು ಘೋಷಿಸಲಾಯಿತು ಮತ್ತು ಸಮಾರಂಭವು ಈ ವಾರದ ಕೊನೆಯಲ್ಲಿ ದೆಹಲಿಯಲ್ಲಿ ನಡೆಯಲಿದೆ. ಈ ಹಿನ್ನೆಲೆ ಕೋರ್ಟ್ ಇದೀಗ ಷರತ್ತು ಬದ್ಧ ಜಾಮೀನು ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments