Webdunia - Bharat's app for daily news and videos

Install App

ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಸಾವಿಗೆ ಆಕ್ರೋಶ ವ್ಯಕ್ತಪಡಿಸಿದ ನಟಿ ರಶ್ಮಿಕಾ ಮಂದಣ್ಣ

Webdunia
ಶನಿವಾರ, 20 ಏಪ್ರಿಲ್ 2019 (06:37 IST)
ಬೆಂಗಳೂರು: ರಾಯಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ನಿಗೂಢ ಸಾವಿನ ಪ್ರಕರಣ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಮಾಡುತ್ತಿದೆ.

 
ಜಸ್ಟಿಸ್ ಫಾರ್ ಮಧು ಹ್ಯಾಶ್ ಟ್ಯಾಗ್ ನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ. ರಾಯಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿರುವ ಮಧು ಏಪ್ರಿಲ್ 13 ರಂದು ಪರೀಕ್ಷೆ ಬರೆಯಲು ಹೋದವಳು ಎರಡು ದಿನದ ಬಳಿಕ ಕಾಲೇಜಿನಿಂದ ಸ್ವಲ್ಪ ದೂರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಓರ್ವನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಇದೀಗ ಮಧು ಸಾವಿನ ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಟ್ವೀಟ್ ಮಾಡಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ.  ‘ಎಲ್ಲಿದೆ ಮನುಷ್ಯತ್ವ? ರಾಯಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಅತ್ಯಾಚಾರಕ್ಕೊಳಗಾಗಿ ಕೊಲೆ ಮಾಡಲಾಗಿದೆ. ಇದು ನಿಜಕ್ಕೂ ಹೃದಯ ವಿದ್ರಾವಕ. ಇಂತಹ ಘಟನೆಗಳು ಕೊನೆಗೊಳ್ಳಲು ಇನ್ನೆಷ್ಟು ಘಟನೆಗಳು ನಡೆಯಬೇಕು? ಮಧುಗೆ ನ್ಯಾಯ ಸಿಗುತ್ತದೆ ಮತ್ತು ಇಂತಹ ಪ್ರಕರಣಗಳು ಕೊನೆಗೊಳ್ಳಬಹುದು ಎಂದು ಆಶಿಸುತ್ತೇನೆ’ ಎಂದು ರಶ್ಮಿಕಾ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments