Webdunia - Bharat's app for daily news and videos

Install App

ಸಂಸದ ಪ್ರತಾಪ್ ಸಿಂಹಗೆ ಥ್ಯಾಂಕ್ಸ್ ಎಂದ ನಟಿ ರಶ್ಮಿಕಾ ಮಂದಣ್ಣ

Webdunia
ಗುರುವಾರ, 9 ಜನವರಿ 2020 (10:03 IST)
ಬೆಂಗಳೂರು: ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣವಾಗಲು ಸಾಮಾಜಿಕ ಜಾಲತಾಣದಲ್ಲಿ ಕೈಗೊಂಡಿದ್ದ ಅಭಿಯಾನಕ್ಕೆ ಕೈ ಜೋಡಿಸಿದವರಲ್ಲಿ ನಟಿ ರಶ್ಮಿಕಾ ಮಂದಣ್ಣ ಕೂಡಾ ಒಬ್ಬರು.


ಸೂಪರ್ ಸ್ಪೆಷಾಲಿಟಿ ಫಾರ್ ಕೊಡಗು ಎಂಬ ಹ್ಯಾಶ್ ಟ್ಯಾಗ್ ನಲ್ಲಿ ಟ್ವಿಟರ್ ನಲ್ಲಿ ಅಭಿಯಾನ ಮಾಡಲಾಗಿತ್ತು. ಇದಕ್ಕೆ ಸ್ಪಂದಿಸಿದ್ದ ಕೊಡಗು ಸಂಸದ ಪ್ರತಾಪ್ ಸಿಂಹ ತಕ್ಷಣವೇ ಕೇಂದ್ರದ ಜತೆ ಮಾತನಾಡಿ ಬೇಕಾದ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದರು. ಅದರಂತೇ ಅನುದಾನವನ್ನೂ ಮಂಜೂರು ಮಾಡಿಸಿಕೊಂಡಿದ್ದರು.

ಇದೀಗ ಆಸ್ಪತ್ರೆ ನಿರ್ಮಾಣಕ್ಕೆ ನೀಲನಕ್ಷೆ ತಯಾರಾಗಿದ್ದು, ಸದ್ಯದಲ್ಲೇ ಭೂಮಿ ಪೂಜೆ ನೆರವೇರಿಸುವುದಾಗಿ ಪ್ರತಾಪ್ ಸಿಂಹ ಟ್ವೀಟ್ ಮೂಲಕ ಹೇಳಿದ್ದಾರೆ. ಅಷ್ಟೇ ಅಲ್ಲ, ಅಭಿಯಾನದಲ್ಲಿ ಪಾಲ್ಗೊಂಡ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಸೇರಿದಂತೆ ಮತ್ತಿತರರಿಗೆ ಈ ವಿಚಾರವನ್ನು ಟ್ಯಾಗ್ ಮಾಡಿ ಗಮನ ಸೆಳೆದಿದ್ದಾರೆ.

ಇದಕ್ಕೆ ರಶ್ಮಿಕಾ ಪ್ರತಿಕ್ರಿಯಿಸಿದ್ದು, ತಮ್ಮ ತವರೂರಿನ ಜನರ ಕನಸು ನನಸು ಮಾಡುತ್ತಿರುವುದಕ್ಕೆ ಸಂಸದ ಪ್ರತಾಪ್ ಸಿಂಹಗೆ ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa: ದರ್ಶನ್ ಆಂಡ್ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್

Renukaswamy Case: ಎರಡನೇ ಭಾರೀ ಜೈಲು ಸೇರಿದ ದರ್ಶನ್‌

ಏನೂ ಆಗಲ್ಲ ಬಾಸ್, ನಿಮ್ಮೊಂದಿಗೆ ನಾವಿದ್ದೇವೆ: ಡಿಬಾಸ್ ಗೆ ಫ್ಯಾನ್ಸ್ ಫುಲ್ ಸಪೋರ್ಟ್

ಫೇವರೇಟ್‌ ಕಲರ್‌ನ ಬಟ್ಟೆ, ಲಿಪ್‌ಸ್ಟಿಕ್‌, ಕ್ಲಿಪ್‌ ಹಾಕಿ ಗ್ಲಾಮರ್‌ ಲುಕ್‌ನಲ್ಲೇ ಹೊರಟ ಪವಿತ್ರಾ

ಜೀಪ್ ನಲ್ಲೂ ಬರಲಿಲ್ಲ, ಪತ್ನಿ ಬಳಿಯೂ ಬರಲಿಲ್ಲ, ದರ್ಶನ್ ಪ್ಲ್ಯಾನ್ ಏನು

ಮುಂದಿನ ಸುದ್ದಿ
Show comments