ಆದಾಯ ತೆರಿಗೆ ದಾಳಿಗೆ ಹೆದರಿ ಮೋದಿಯನ್ನು ಹೊಗಳಿದಿರಾ? ರಶ್ಮಿಕಾ ಮಂದಣ್ಣಗೆ ಟೀಕೆ

Krishnaveni K
ಶುಕ್ರವಾರ, 17 ಮೇ 2024 (11:39 IST)
Photo Courtesy: Twitter
ಮುಂಬೈ: ಇತ್ತೀಚೆಗೆ ನಟಿ ರಶ್ಮಿಕಾ ಮಂದಣ್ಣ ಕಳೆದ 10 ವರ್ಷಗಳಲ್ಲಿ ದೇಶ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಅಭಿವೃದ್ಧಿಗೆ ನೋಡಿ ಮತ ಹಾಕಿ ಎಂದು ಹೇಳಿಕೆ ನೀಡಿದ್ದರು. ಅವರ ಈ ಹೇಳಿಕೆ ಈಗ ಎಡಪಂಥೀಯರ ಕೆಂಗಣ್ಣಿಗೆ ಗುರಿಯಾಗಿದೆ.

ನವಿ ಮುಂಬೈನಿಂದ ಮುಂಬೈಗೆ ಸಂಪರ್ಕ ನೀಡುವ ಅಟಲ್ ಸೇತು ಯೋಜನೆಯನ್ನು ಹೊಗಳಿದ್ದ ರಶ್ಮಿಕಾ ಕಳೆದ 10 ವರ್ಷಗಳಲ್ಲಿ ದೇಶ ಸಾಕಷ್ಟು ಸಾಧನೆ ಮಾಡಿದೆ ಎಂದಿದ್ದರು. ಆ ಮೂಲಕ ಪ್ರಧಾನಿ ಮೋದಿ ನೇತೃತ್ವದ ಆಡಳಿತವನ್ನು ಹೊಗಳಿದ್ದರು. ಆದರೆ ಅವರು ಇಂತಹದ್ದೊಂದು ಹೇಳಿಕೆ ನೀಡುತ್ತಿದ್ದಂತೇ ಎಡಪಂಥೀಯರು, ವಿಚಾರವಾದಿಗಳ ಕಣ್ಣು ಕೆಂಪಾಗಿದೆ.

ರಶ್ಮಿಕಾ ಹೇಳಿಕೆಗೆ ಟಾಂಗ್ ಕೊಟ್ಟಿರುವ ಸ್ಯಾಂಡಲ್ ವುಡ್ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ, ಕಳೆದ 10 ವರ್ಷಗಳಲ್ಲಿ ದೇಶದಲ್ಲಿ ಅಸಮಾನತೆ ಗಗನಕ್ಕೇರಿದೆ, ಕಾಂಕ್ರೀಟ್ ಸುರಿದು ಕಟ್ಟಡ ನಿರ್ಮಾಣವನ್ನು ಯಾವ ಪಕ್ಷ ಬೇಕಾದರೂ ಮಾಡಬಹುದು ಎಂದಿದ್ದಾರೆ.

ರಶ್ಮಿಕಾ ಟ್ವೀಟ್ ನ್ನು ಮೋದಿ ರಿ ಟ್ವೀಟ್ ಮಾಡಿದ ಮೇಲಂತೂ ಮತ್ತಷ್ಟು ಜನ ಕಾಲೆಳೆದಿದ್ದಾರೆ. ರಶ್ಮಿಕಾ ಆದಾಯ ತೆರಿಗೆ ಇಲಾಖೆ ದಾಳಿಗೊಗಾಗುವ ಭಯದಿಂದ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಅವರಿಗೆ ನಾಚಿಕೆಯಾಗಬೇಕು ಎಂದು ಒಬ್ಬ ಎಕ್ಸ್ ಬಳಕೆದಾರ ಟೀಕೆ ಮಾಡಿದ್ದಾರೆ. ಮತ್ತೆ ಕೆಲವರು ರಶ್ಮಿಕಾರನ್ನು ಬೆಂಬಲಿಸಿದ್ದು, ಆಕೆಯನ್ನು ವಿರೋಧಿಸುವವರನ್ನು ನೋಡಿದರೆ ಅಯ್ಯೋ ಎನಿಸುತ್ತಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

Kurnool Bus Tragedy: ಆ ಜೀವಗಳು ಅದೆಷ್ಟೂ ನೋವು ಅನುಭವಿಸರಬೇಕು: ರಶ್ಮಿಕಾ ಮಂದಣ್ಣ ಕಂಬನಿ

BBK12: ಕಿಚ್ಚ ಸುದೀಪ್ ಹೇಳಿದ್ರೂಂತ ಡ್ರಾಮಾ ಮಾಡ್ತಿದ್ದಾರಾ ಅಶ್ವಿನಿ, ಜಾನ್ವಿ

ಮುಂದಿನ ಸುದ್ದಿ
Show comments