Webdunia - Bharat's app for daily news and videos

Install App

ಆದಾಯ ತೆರಿಗೆ ದಾಳಿಗೆ ಹೆದರಿ ಮೋದಿಯನ್ನು ಹೊಗಳಿದಿರಾ? ರಶ್ಮಿಕಾ ಮಂದಣ್ಣಗೆ ಟೀಕೆ

Krishnaveni K
ಶುಕ್ರವಾರ, 17 ಮೇ 2024 (11:39 IST)
Photo Courtesy: Twitter
ಮುಂಬೈ: ಇತ್ತೀಚೆಗೆ ನಟಿ ರಶ್ಮಿಕಾ ಮಂದಣ್ಣ ಕಳೆದ 10 ವರ್ಷಗಳಲ್ಲಿ ದೇಶ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಅಭಿವೃದ್ಧಿಗೆ ನೋಡಿ ಮತ ಹಾಕಿ ಎಂದು ಹೇಳಿಕೆ ನೀಡಿದ್ದರು. ಅವರ ಈ ಹೇಳಿಕೆ ಈಗ ಎಡಪಂಥೀಯರ ಕೆಂಗಣ್ಣಿಗೆ ಗುರಿಯಾಗಿದೆ.

ನವಿ ಮುಂಬೈನಿಂದ ಮುಂಬೈಗೆ ಸಂಪರ್ಕ ನೀಡುವ ಅಟಲ್ ಸೇತು ಯೋಜನೆಯನ್ನು ಹೊಗಳಿದ್ದ ರಶ್ಮಿಕಾ ಕಳೆದ 10 ವರ್ಷಗಳಲ್ಲಿ ದೇಶ ಸಾಕಷ್ಟು ಸಾಧನೆ ಮಾಡಿದೆ ಎಂದಿದ್ದರು. ಆ ಮೂಲಕ ಪ್ರಧಾನಿ ಮೋದಿ ನೇತೃತ್ವದ ಆಡಳಿತವನ್ನು ಹೊಗಳಿದ್ದರು. ಆದರೆ ಅವರು ಇಂತಹದ್ದೊಂದು ಹೇಳಿಕೆ ನೀಡುತ್ತಿದ್ದಂತೇ ಎಡಪಂಥೀಯರು, ವಿಚಾರವಾದಿಗಳ ಕಣ್ಣು ಕೆಂಪಾಗಿದೆ.

ರಶ್ಮಿಕಾ ಹೇಳಿಕೆಗೆ ಟಾಂಗ್ ಕೊಟ್ಟಿರುವ ಸ್ಯಾಂಡಲ್ ವುಡ್ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ, ಕಳೆದ 10 ವರ್ಷಗಳಲ್ಲಿ ದೇಶದಲ್ಲಿ ಅಸಮಾನತೆ ಗಗನಕ್ಕೇರಿದೆ, ಕಾಂಕ್ರೀಟ್ ಸುರಿದು ಕಟ್ಟಡ ನಿರ್ಮಾಣವನ್ನು ಯಾವ ಪಕ್ಷ ಬೇಕಾದರೂ ಮಾಡಬಹುದು ಎಂದಿದ್ದಾರೆ.

ರಶ್ಮಿಕಾ ಟ್ವೀಟ್ ನ್ನು ಮೋದಿ ರಿ ಟ್ವೀಟ್ ಮಾಡಿದ ಮೇಲಂತೂ ಮತ್ತಷ್ಟು ಜನ ಕಾಲೆಳೆದಿದ್ದಾರೆ. ರಶ್ಮಿಕಾ ಆದಾಯ ತೆರಿಗೆ ಇಲಾಖೆ ದಾಳಿಗೊಗಾಗುವ ಭಯದಿಂದ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಅವರಿಗೆ ನಾಚಿಕೆಯಾಗಬೇಕು ಎಂದು ಒಬ್ಬ ಎಕ್ಸ್ ಬಳಕೆದಾರ ಟೀಕೆ ಮಾಡಿದ್ದಾರೆ. ಮತ್ತೆ ಕೆಲವರು ರಶ್ಮಿಕಾರನ್ನು ಬೆಂಬಲಿಸಿದ್ದು, ಆಕೆಯನ್ನು ವಿರೋಧಿಸುವವರನ್ನು ನೋಡಿದರೆ ಅಯ್ಯೋ ಎನಿಸುತ್ತಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments