Webdunia - Bharat's app for daily news and videos

Install App

ರಶ್ಮಿಕಾ ಮಂದಣ್ಣರಿಂದಾಗಿ ಟ್ರೋಲ್ ಆದ ಆರ್ ಸಿಬಿ

Krishnaveni K
ಸೋಮವಾರ, 18 ಮಾರ್ಚ್ 2024 (20:44 IST)
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೇಲೆ ಅಭಿಮಾನಿಗಳು ಈಗ ರಶ್ಮಿಕಾ ಮಂದಣ್ಣ ವಿಚಾರಕ್ಕೆ ಸಿಟ್ಟಾಗಿದ್ದಾರೆ. ಇದಕ್ಕೆ ಕಾರಣ ಆರ್ ಸಿಬಿ ಮರುನಾಮಕರಣದ ಪ್ರೋಮೋ ವಿಡಿಯೋ.

ಇದುವರೆಗೆ ಪ್ರೋಮೋ ವಿಡಿಯೋದಲ್ಲಿ ರಿಷಬ್ ಶೆಟ್ಟಿ, ಶಿವರಾಜ್ ಕುಮಾರ್, ಡ್ಯಾನಿಶ್ ಸೇಠ್, ಕಿಚ್ಚ ಸುದೀಪ್ ಸೇರಿದಂತೆ ಅಪ್ಪಟ ಕನ್ನಡಿಗರು ಬಂದು ಆರ್ ಸಿಬಿ ಹೊಸ ಹೆಸರಿನ ಬಗ್ಗೆ ಸುಳಿವು ನೀಡಿದ್ದರು. ಈ ಪ್ರೋಮೋಗಳು ಅಭಿಮಾನಿಗಳಿಗೆ ಭಾರೀ ಇಷ್ಟವಾಗಿತ್ತು ಕೂಡಾ.

ಆದರೆ ಈಗ ಇದೇ ಪ್ರೋಮೋದಲ್ಲಿ ರಶ್ಮಿಕಾ ಮಂದಣ್ಣರನ್ನು ಹಾಕಿಕೊಳ್ಳಲಾಗಿದೆ. ರಶ್ಮಿಕಾ ಕೂಡಾ ಬೆಂಗಳೂರು ಹೆಸರು ಬದಲಾಯಿಸುವ ಪ್ರೋಮೋ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದು ಇದನ್ನು ನೋಡಿ ಆರ್ ಸಿಬಿ ಅಭಿಮಾನಿಗಳು ಸಿಟ್ಟಾಗಿದ್ದಾರೆ. ನಿಮಗೆ ಪ್ರೋಮೋ ಮಾಡಲು ಬೇರೆ ಯಾರೂ ಸಿಗಲಿಲ್ಲವೇ ಎಂದು ಕಿಡಿ ಕಾರಿದ್ದಾರೆ.

ಕನ್ನಡತಿಯೇ ಆದರೂ ಇದೀಗ ಕನ್ನಡವನ್ನೇ ಮರೆತಿದ್ದಾರೆ ಎಂದು ರಶ‍್ಮಿಕಾ ಮಂದಣ್ಣ ಮೇಲೆ ಅಭಿಮಾನಿಗಳಿಗೆ ಸಿಟ್ಟಿದೆ. ಸದ್ಯಕ್ಕೆ ಕನ್ನಡ ಬಿಟ್ಟು ಪರಭಾಷೆಗಳಲ್ಲಿ ಮಿಂಚುತ್ತಿರುವ ರಶ್ಮಿಕಾರನ್ನು ಹಾಕಿಕೊಳ್ಳುವ ಬದಲು ಬೇರೆ ಕನ್ನಡಿಗರನ್ನು ಹಾಕಿ ಪ್ರೋಮೋ ವಿಡಿಯೋ ಮಾಡಬಹುದಿತ್ತಲ್ಲಾ ಎಂದು ಅಭಿಮಾನಿಗಳು ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments