Webdunia - Bharat's app for daily news and videos

Install App

ರಿಯಲ್ ಸ್ಟಾರ್ ಉಪೇಂದ್ರರ ಪ್ರಜಾಕೀಯಗೆ ಜನಸೇವೆ ಮಾಡಲು ದೇಣಿಗೆ ನೀಡುತ್ತಿರುವ ನಟ-ನಟಿಯರು

Webdunia
ಬುಧವಾರ, 12 ಮೇ 2021 (09:40 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಕೊರೋನಾದ ಸಂಕಷ್ಟ ಸಮಯದಲ್ಲಿ ತಮ್ಮ ಪ್ರಜಾಕೀಯದ ಮೂಲಕ ಜನರಿಗೆ ನೆರವಾಗುತ್ತಿದ್ದಾರೆ. ಅವರ ನೆರವಿಗೆ ಸ್ಯಾಂಡಲ್ ವುಡ್ ಸ್ನೇಹಿತರು ಕೈ ಜೋಡಿಸಿದ್ದಾರೆ.


ಉಪೇಂದ್ರ ನೇತೃತ್ವದಲ್ಲಿ ಸಿನಿ, ಕಿರುತೆರೆ ಕಲಾವಿದರು, ಕಾರ್ಮಿಕರಿಗೆ ದಿನಸಿ ಕಿಟ್, ಧನ ಸಹಾಯ ಒದಗಿಸಲಾಗುತ್ತಿದೆ. ಇದಕ್ಕೆ ಅವರಿಗೆ ಚಿತ್ರರಂಗದ ಸ್ನೇಹಿತರು ಸಾಥ‍್ ಕೊಟ್ಟಿದ್ದಾರೆ. ಕಲಾವಿದರು ತಮಗೆ ನೀಡಿದ ಹಣದ ಮೊತ್ತವನ್ನು ಉಪೇಂದ್ರ ಬಹಿರಂಗವಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.

ಹಿರಿಯ ಕಲಾವಿದೆ ಸರೋಜಾದೇವಿ ನಾಲ್ಕು ಲಕ್ಷ ರೂ. ನೀಡಿದ್ದು ಸಂಗೀತ ಕ್ಷೇತ್ರದಲ್ಲಿ ಸಂಕಷ್ಟದಲ್ಲಿರುವವರಿಗೆ ತಲುಪಿಸಲಿದ್ದಾರೆ. ಸಾಧು ಕೋಕಿಲ ಎರಡೂವರೆ ಲಕ್ಷ ರೂ. ನೀಡಿದ್ದು, ಇದನ್ನು ಆರ್ಕೆಸ್ಟ್ರಾ ಕಲಾವಿದರ ದಿನಸಿ ಕಿಟ್ ಗೆ ಬಳಸಿಕೊಳ್ಳುತ್ತಿದ್ದಾರೆ. ನಿರ್ದೇಶಕ ಪವನ್ ಒಡೆಯರ್ 20 ಸಾವಿರ ರೂ.ಗಳ ದೇಣಿಗೆ ನೀಡಿದ್ದು ಇದನ್ನು ಚಲನಚಿತ್ರ ಸಂಗೀತ ಕಲಾವಿದರಿಗೆ ಒದಗಿಸಲಿದ್ದಾರೆ. ಇದೇ ರೀತಿ ನಟ ಶೋಭಾ ರಾಜ್ 10 ಸಾವಿರ ರೂ. ನೀಡಿದ್ದಾರೆ. ಅದಲ್ಲದೆ, ಬೇರೆ ಬೇರೆ ಕ್ಷೇತ್ರದ ಸ್ನೇಹಿತರಿಂದಲೂ ಉಪೇಂದ್ರರಿಗೆ ದೇಣಿಗೆ ಹರಿದುಬಂದಿದೆ. ಇದನ್ನು ಅರ್ಹರಿಗೆ ತಲುಪಿಸುವ ಕೆಲಸ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments