Webdunia - Bharat's app for daily news and videos

Install App

ಎನ್ ಕೌಂಟರ್ ಆದವರೇ ರೇಪಿಸ್ಟ್ ಗಳು ಎನ್ನುವುದಕ್ಕೆ ಸಾಕ್ಷ್ಯವೇನು? ರಿಯಲ್ ಸ್ಟಾರ್ ಉಪೇಂದ್ರ ತಕರಾರು

Webdunia
ಶನಿವಾರ, 7 ಡಿಸೆಂಬರ್ 2019 (08:45 IST)
ಬೆಂಗಳೂರು: ಹೈದರಾಬಾದ್ ನಲ್ಲಿ ಪಶು ವೈದ್ಯೆಯ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದ ಆರೋಪಿಗಳನ್ನು ಎನ್ ಕೌಂಟರ್ ಮಾಡಿರುವ ಪೊಲೀಸರ ಕ್ರಮವನ್ನು ರಿಯಲ್ ಸ್ಟಾರ್ ಉಪೇಂದ್ರ ಪ್ರಶ್ನಿಸಿದ್ದಾರೆ. ಅವರ ಈ ತಕರಾರಿಗೆ ಹಲವು ಪರ ವಿರೋಧ ಅಭಿಪ್ರಾಯಗಳೂ ವ್ಯಕ್ತವಾಗಿದೆ.


ತಮ್ಮ ಸಾಮಾಜಿಕ ಜಾಲತಾಣದಲ್ಲಿ ಉಪೇಂದ್ರ ಈ ನಾಲ್ಕು ಹುಡುಗರೇ ಆಕೆಯನ್ನು ರೇಪ್ ಮಾಡಿ ಸುಟ್ಟು ಹಾಕಿದ್ದಾರೋ ಇಲ್ಲ ಇದರ ಹಿಂದೆ ಬೇರೆ ಯಾರೋ ಪ್ರಮುಖ ವ್ಯಕ್ತಿಗಳ ಕೈವಾಡವಿದೆಯಾ? ಈ ರೀತಿಯ ಎನ್ ಕೌಂಟರ್ ಪ್ರಮುಖ ವ್ಯಕ್ತಿಗಳ ಕೇಸ್ನಲ್ಲಿ ಯಾಕಾಗುವುದಿಲ್ಲ? ಕೋರ್ಟಲ್ಲಿ ವಿಚಾರಣೆಗೂ ಮುನ್ನ ನಡೆದ ಎನ್ ಕೌಂಟರ್ ಇನ್ನು ಮುಂದೆ ಪ್ರಭಾವಶಾಲಿ ರೇಪಿಸ್ಟ್ ಗಳಿಗೆ ರತ್ನಗಂಬಳಿಯಾಗುವುದೇ? ಎಂದು ಬರೆದುಕೊಂಡಿದ್ದಾರೆ.

ಇದಕ್ಕೆ ಹಲವರು ಪರ-ವಿರೋಧವಾಗಿ ಚರ್ಚೆ ಮಾಡಿದ್ದಾರೆ. ತಮ್ಮ ಅಭಿಪ್ರಾಯದ ಬಗ್ಗೆ ಚರ್ಚೆಯಾಗುತ್ತಿದ್ದಂತೆ ಉಪೇಂದ್ರ ಮತ್ತೊಂದು ಸಂದೇಶ ಬರೆದಿದ್ದು ‘ಒಂದು ಕಾಲದಲ್ಲಿ ಇದೇ ರೀತಿ ಎನ್ ಕೌಂಟರ್ ಮಾಡಿ ರೌಡಿಸಂಗೆ ಕಡಿವಾಣ ಹಾಕಿದ ಹಾಗೆ ನಿಷ್ಠಾವಂತ ಪೊಲೀಸ್ ಅಧಿಕಾರಿಗಳು ಮನಸು ಮಾಡಿದರೆ ಎನ್ ಕೌಂಟರ್ ಮೂಲಕ ಈ ಅತ್ಯಾಚಾರದ ಪಿಡುಗನ್ನು ನಿರ್ಮೂಲನೆ ಮಾಡಬಹುದು. ಆದರೆ ಇದನ್ನು ಹಣವಂತರು, ಪ್ರಭಾವಿಗಳು ದುರುಪಯೋಗ ಪಡಿಸಿಕೊಳ್ಳದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು’ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments