ರಿಯಲ್ ಸ್ಟಾರ್ ಉಪೇಂದ್ರರ ಪ್ರಜಾಕೀಯಗೆ ಜನಸೇವೆ ಮಾಡಲು ದೇಣಿಗೆ ನೀಡುತ್ತಿರುವ ನಟ-ನಟಿಯರು

Webdunia
ಬುಧವಾರ, 12 ಮೇ 2021 (09:40 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಕೊರೋನಾದ ಸಂಕಷ್ಟ ಸಮಯದಲ್ಲಿ ತಮ್ಮ ಪ್ರಜಾಕೀಯದ ಮೂಲಕ ಜನರಿಗೆ ನೆರವಾಗುತ್ತಿದ್ದಾರೆ. ಅವರ ನೆರವಿಗೆ ಸ್ಯಾಂಡಲ್ ವುಡ್ ಸ್ನೇಹಿತರು ಕೈ ಜೋಡಿಸಿದ್ದಾರೆ.


ಉಪೇಂದ್ರ ನೇತೃತ್ವದಲ್ಲಿ ಸಿನಿ, ಕಿರುತೆರೆ ಕಲಾವಿದರು, ಕಾರ್ಮಿಕರಿಗೆ ದಿನಸಿ ಕಿಟ್, ಧನ ಸಹಾಯ ಒದಗಿಸಲಾಗುತ್ತಿದೆ. ಇದಕ್ಕೆ ಅವರಿಗೆ ಚಿತ್ರರಂಗದ ಸ್ನೇಹಿತರು ಸಾಥ‍್ ಕೊಟ್ಟಿದ್ದಾರೆ. ಕಲಾವಿದರು ತಮಗೆ ನೀಡಿದ ಹಣದ ಮೊತ್ತವನ್ನು ಉಪೇಂದ್ರ ಬಹಿರಂಗವಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.

ಹಿರಿಯ ಕಲಾವಿದೆ ಸರೋಜಾದೇವಿ ನಾಲ್ಕು ಲಕ್ಷ ರೂ. ನೀಡಿದ್ದು ಸಂಗೀತ ಕ್ಷೇತ್ರದಲ್ಲಿ ಸಂಕಷ್ಟದಲ್ಲಿರುವವರಿಗೆ ತಲುಪಿಸಲಿದ್ದಾರೆ. ಸಾಧು ಕೋಕಿಲ ಎರಡೂವರೆ ಲಕ್ಷ ರೂ. ನೀಡಿದ್ದು, ಇದನ್ನು ಆರ್ಕೆಸ್ಟ್ರಾ ಕಲಾವಿದರ ದಿನಸಿ ಕಿಟ್ ಗೆ ಬಳಸಿಕೊಳ್ಳುತ್ತಿದ್ದಾರೆ. ನಿರ್ದೇಶಕ ಪವನ್ ಒಡೆಯರ್ 20 ಸಾವಿರ ರೂ.ಗಳ ದೇಣಿಗೆ ನೀಡಿದ್ದು ಇದನ್ನು ಚಲನಚಿತ್ರ ಸಂಗೀತ ಕಲಾವಿದರಿಗೆ ಒದಗಿಸಲಿದ್ದಾರೆ. ಇದೇ ರೀತಿ ನಟ ಶೋಭಾ ರಾಜ್ 10 ಸಾವಿರ ರೂ. ನೀಡಿದ್ದಾರೆ. ಅದಲ್ಲದೆ, ಬೇರೆ ಬೇರೆ ಕ್ಷೇತ್ರದ ಸ್ನೇಹಿತರಿಂದಲೂ ಉಪೇಂದ್ರರಿಗೆ ದೇಣಿಗೆ ಹರಿದುಬಂದಿದೆ. ಇದನ್ನು ಅರ್ಹರಿಗೆ ತಲುಪಿಸುವ ಕೆಲಸ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

Kurnool Bus Tragedy: ಆ ಜೀವಗಳು ಅದೆಷ್ಟೂ ನೋವು ಅನುಭವಿಸರಬೇಕು: ರಶ್ಮಿಕಾ ಮಂದಣ್ಣ ಕಂಬನಿ

BBK12: ಕಿಚ್ಚ ಸುದೀಪ್ ಹೇಳಿದ್ರೂಂತ ಡ್ರಾಮಾ ಮಾಡ್ತಿದ್ದಾರಾ ಅಶ್ವಿನಿ, ಜಾನ್ವಿ

ಮುಂದಿನ ಸುದ್ದಿ
Show comments