Select Your Language

Notifications

webdunia
webdunia
webdunia
webdunia

ದರ್ಶನ್ ಪರ ಜಾಮೀನು ಅರ್ಜಿ ಹಾಕದೇ ಇರಲು ಕಾರಣವೇನು ಎಂದು ತಿಳಿಸಿದ ವಕೀಲರು

Dashan

Krishnaveni K

ಬೆಂಗಳೂರು , ಸೋಮವಾರ, 9 ಸೆಪ್ಟಂಬರ್ 2024 (16:09 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಬಂಧನದಲ್ಲಿರುವ ನಟ ದರ್ಶನ್ ಪರ ವಕೀಲರು ಇಂದು ಜಾಮೀನು ಅರ್ಜಿ ಸಲ್ಲಿಸಿಲ್ಲವೇಕೆ ಎಂಬುದನ್ನು ಸ್ಪಷ್ಟನೆ ನೀಡಿದ್ದಾರೆ.
 

ದರ್ಶನ್ ಮತ್ತು ಇತರೆ ಆರೋಪಿಗಳು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರಾಗಿದ್ದಾರೆ. ಈಗಾಗಲೇ ಪೊಲೀಸರು ಪ್ರಾಥಮಿಕ ಚಾರ್ಜ್ ಶೀಟ್ ಸಲ್ಲಿಕೆ ಮಾಡಿರುವುದರಿಂದ ದರ್ಶನ್ ಪರ ವಕೀಲರು ಇಂದು ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದು ನಿರೀಕ್ಷಿಸಲಾಗಿತ್ತು.

ಆದರೆ ಇಂದು ಯಾವುದೇ ಆರೋಪಿಗಳೂ ಜಾಮೀನು ಅರ್ಜಿ ಸಲ್ಲಿಕೆ ಮಾಡಿಲ್ಲ. ಇದಕ್ಕೆ ಕಾರಣವೇನೆಂದು ದರ್ಶನ್ ಪರ ವಕೀಲರು ಸ್ಪಷ್ಟನೆ ನೀಡಿದ್ದಾರೆ. ಪೊಲೀಸರು ಇನ್ನಷ್ಟು ಆರೋಪ ಪಟ್ಟಿಯನ್ನು ಕೋರ್ಟ್ ಗೆ ಸಲ್ಲಿಸಬೇಕಿದೆ. ಹೀಗಾಗಿ ಸಂಪೂರ್ಣ ಚಾರ್ಜ್ ಶೀಟ್ ನೋಡಿದ ಬಳಿಕವಷ್ಟೇ ಜಾಮೀನಿಗೆ ಅರ್ಜಿ ಸಲ್ಲಿಸುತ್ತೇವೆ ಎಂದು ವಕೀಲರು ಸ್ಪಷ್ಟನೆ ನೀಡಿದ್ದಾರೆ.

ಹೀಗಾಗಿ ದರ್ಶನ್ ಪರ ಜಾಮೀನು ಅರ್ಜಿ ಸಲ್ಲಿಕೆ ಮಾಡಲು ಇನ್ನೂ ಒಂದು ಅಥವಾ ಎರಡು ವಾರಗಳಾಗಬಹುದು. ಇಂದು ನ್ಯಾಯಾಧೀಶರು ಎಲ್ಲಾ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದ್ದಾರೆ. ಹೀಗಾಗಿ ದರ್ಶನ್ ಆಂಡ್ ಜೈಲು ವಾಸ ಇನ್ನಷ್ಟು ದಿನ ಮುಂದುವರಿಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡಕ್ಕೆ ಸೂಪರ್ ಹಿಟ್ ಹಾಡು ನೀಡಿದ ಗುರುಕಿರಣ್‌ಗೆ ಗೌರವ ಡಾಕ್ಟರೇಟ್